ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಜನಾರ್ದನ ಪೂಜಾರಿ ದೋಷ ಮುಕ್ತಿ

10:38 AM, Saturday, October 6th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

poojary ಮಂಗಳೂರು: ಚುನಾವಣೆಯ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಮೇಲೆ ಇದ್ದ ಪ್ರಕರಣ ಖುಲಾಸೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಿಂದ ಜನಾರ್ದನ ಪೂಜಾರಿ ನಿರಾಳರಾಗಿದ್ದಾರೆ.

ಈ ಬಗ್ಗೆ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾದ ಬಗ್ಗೆ ಮಾಹಿತಿ ನೀಡಲು ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಸಮ್ಮುಖದಲ್ಲಿ ವಕೀಲ ಪದ್ಮರಾಜ್ ಅವರು ಈ ಮಾಹಿತಿ ನೀಡಿದರು.

ನೀರಿನ ದರ ಏರಿಕೆ ಸಂಬಂಧಿಸಿದಂತೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರಿನ ಜೆಎಂಎಫ್ಸಿ 2 ನೇ ನ್ಯಾಯಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಈ ಬಗ್ಗೆ ಜನಾರ್ದನ ಪೂಜಾರಿ ಅವರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ಪ್ರಕರಣ ವಜಾ ಮಾಡುವಂತೆ ವಿನಂತಿಸಿದ್ದರು. ಜನಾರ್ದನ ಪೂಜಾರಿ ಮನವಿ ಪುಸ್ಕರಿಸಿದ ನ್ಯಾಯಲಯ ಪ್ರಕರಣವನ್ನು ವಜಾಗೊಳಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English