ಸಚಿವ ಡಿ.ಕೆ.ಶಿವಕುಮಾರ್​ ವಿರುದ್ಧ ಮತ್ತೊಂದು ಎಫ್​ಐಆರ್​​!

10:06 AM, Monday, October 8th, 2018
Share
1 Star2 Stars3 Stars4 Stars5 Stars
(No Ratings Yet)
Loading...

d-k-shivkumarಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅಧಿಕಾರಿ ನೀಡಿದ ದೂರಿನನ್ವಯ ಸಚಿವರ ವಿರುದ್ಧ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಅನಧಿಕೃತ ಜಾಹೀರಾತು ಫಲಕ ಅಳವಡಿಸಿದಕ್ಕಾಗಿ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಮುತ್ತುರಾಜ್ ರಾಜ್ಯ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಿದ್ದಾರೆ.

ಅನಧಿಕೃತ ಜಾಹೀರಾತು ಫಲಕ ಪ್ರದರ್ಶಿಸಿದಕ್ಕೆ ಡಿಕೆಶಿ ವಿರುದ್ಧ ಬಿಬಿಎಂಪಿ ಅಧಿಕಾರಿ ದೂರು ನೀಡಿದ್ದಾರೆ. ಅನಧಿಕೃತ ಜಾಹೀರಾತು ಫಲಕಗಳನ್ನು ನಿಷೇಧಿಸಿದ್ದ ಹೈಕೋರ್ಟ್, ಬಳಿಕ ನ್ಯಾಯಾಲಯದ ಸೂಚನೆಯಂತೆ ನಗರದಾದ್ಯಂತ ಅನಧಿಕೃತ ಜಾಹೀರಾತು ತೆರವುಗೊಳಿಸಲು ಬಿಬಿಎಂಪಿ ಮುಂದಾಗಿತ್ತು.

ಆದರೆ ಮೈಸೂರು ರಸ್ತೆಯ ಪಂತರಪಾಳ್ಯದ ಡಿಕೆಶಿ ಮಾಲೀಕತ್ವದ ಜಾಗದಲ್ಲಿ ಜಾಹೀರಾತು ಫಲಕವನ್ನು ಹಾಕಲಾಗಿತ್ತು. ಹಾಗಾಗಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸುವಂತೆ ಡಿಕೆಶಿಗೆ ಬಿಬಿಎಂಪಿ ನೋಟಿಸ್ ನೀಡಿತ್ತು.

ಆದರೆ ಈ ವಿಷಯವನ್ನು ಡಿಕೆಶಿ ಗಣನೆಗೆ ತೆಗೆದುಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿ ಮುತ್ತುರಾಜ್ ಬ್ಯಾಟರಾಯನಪುರ ಠಾಣೆಗೆ ದೂರು ನೀಡಿದ್ದಾರೆ. ಇದೀಗ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English