- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಉಪ ಚುನಾವಣೆ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್​​ನಿಂದ ಮ್ಯಾರಥಾನ್​ ಸಭೆ

congress [1]ಬೆಂಗಳೂರು: ರಾಜ್ಯದ ಐದು ಉಪ ಚುನಾವಣೆಗಳಿಗೆ ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್ ಪಕ್ಷ ಇಂದು ಮ್ಯಾರಥಾನ್ ಸಭೆ ನಡೆಸಲಿದೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಈ ಮಹತ್ವದ ಸಭೆ ನಡೆಯಲಿದೆ.

ಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ಮೈತ್ರಿ, ಎಲ್ಲೆಲ್ಲಿ ಕೈ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು, ಮೈತ್ರಿ ಧರ್ಮ ಪಾಲನೆ, ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಜತೆಗೆ ಮೈತ್ರಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಹೇಗೆ ಶ್ರಮಿಸುವುದು, ನಮ್ಮ ಕಾರ್ಯಕರ್ತರಿಗೆ ಹೇಗೆ ಮನವರಿಕೆ ಮಾಡಿಕೊಡುವುದು, ಬಿಜೆಪಿ ಪ್ರಬಲವಾಗಿರುವ ಕ್ಷೇತ್ರದಲ್ಲಿಯೂ ನಮ್ಮ ಯಾವ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬ ಕುರಿತು ಸುದೀರ್ಘ ಚರ್ಚೆ ನಡೆಸಲಿದ್ದಾರೆ.