ಮಂಗಳೂರು: ಕೊಡಗು ನೆರೆ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ನಾಲ್ವರು ಬಜರಂಗದಳ ಕಾರ್ಯಕರ್ತರಿಗೆ ಸಚಿವ ಜಮೀರ್ ಅಹ್ಮದ್ ತಮ್ಮ ಸ್ವಂತ 4 ಲಕ್ಷ ರೂ. ನಗದು ನೀಡಿ ಅಭಿನಂದಿಸಿದ್ದಾರೆ.
ಕಾನೂನು ಮಾಪನ ಶಾಸ್ತ್ರ ಇಲಾಖೆ ದ.ಕ. ಇದರ ವತಿಯಿಂದ ಕಾನೂನು ಮಾಪನ ಶಾಸ್ತ್ರ ಇಲಾಖೆಗಳ ಕಚೇರಿಗಳ ಸಂಕೀರ್ಣ ಮಾಪನ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವ ಜಮೀರ್ ಅಹ್ಮದ್ ಈ ನಗದು ಕೊಡುಗೆಯನ್ನು ನೀಡಿದರು. ಈ ಸಂದರ್ಭ ಸಚಿವ ಜಮೀರ್ ಅಹ್ಮದ್ ಮಾತನಾಡಿ, ಇತ್ತೀಚೆಗೆ ಕೊಡಗಿನಲ್ಲಿ ನಡೆದ ಪ್ರಕೃತಿ ವಿಕೋಪದ ಸಂದರ್ಭ 16 ಜನ ಯುವಕರು ತಮ್ಮ ಜೀವದ ಹಂಗು ತೊರೆದು 200 ಜನರ ಪ್ರಾಣ ಉಳಿಸಿದ್ದಾರೆ. ಅವರಲ್ಲಿ 12 ಜನ ಮಧ್ಯಮ ವರ್ಗದ ಮುಸ್ಲಿಂ ಯುವಕರು ಹಾಗೂ 4 ಹಿಂದೂ ಯುವಕರು.
ಮುಸ್ಲಿಂ ಯುವಕರ ಅಪೇಕ್ಷೆಯಂತೆ ಅವರನ್ನು ಉಮ್ರಾಕ್ಕೆ ತೆರಳಲು ವ್ಯವಸ್ಥೆ ಮಾಡಿದ್ದೆ. ಆದರೆ ಉಳಿದ ನಾಲ್ಕು ಯುವಕರಿಗೆ ನಾನು ಭಾರತದ ಯಾವ ಹಿಂದೂ ಕ್ಷೇತ್ರಕ್ಕೆ ವ್ಯವಸ್ಥೆ ಮಾಡಿಕೊಡಬೇಕೆಂದು ಕೇಳಿದಾಗ ಅವರು ತಮ್ಮ ಕುಟುಂಬಸ್ಥರ ಸಮೇತ ತಾವೇ ತೆರಳುತ್ತೇವೆ ಎಂದು ಹೇಳಿದ ಹಿನ್ನೆಲೆಯಲ್ಲಿ ಇಂದು ಈ ನಗದು ನೀಡುತ್ತಿದ್ದೇನೆ ಎಂದು ಹೇಳಿದರು.
ಈ ಸಂದರ್ಭ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಮೇಯರ್ ಭಾಸ್ಕರ ಕೆ., ಕಣಚೂರು ಮೋನು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English