ಮಂಗಳೂರು: ಸಾರ್ವಜನಿಕರಿಗೆ ಹಾಗೂ ಕಾಲೇಜು ಮಕ್ಕಳಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಗಾಂಜಾ ಸಹಿತ ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಮೆದು ಮನೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ (30), ಬೋಳಂತೂರು ಗ್ರಾಮದ ಬೋಳಂತೂರು ಮನೆ ನಿವಾಸಿ ಮಹಮ್ಮದ್ ರಫೀಕ್ (32), ಕುಕ್ಕಿನಡ್ಕ ಮನೆ ನಿವಾಸಿ ಅಜೀದ್ (33) ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 4.100 ಕೆ.ಜಿ. ತೂಕದ ಗಾಂಜಾ, 1 ಅಟೋ ರಿಕ್ಷಾ ಮತ್ತು ಬೈಕ್ ಸಹಿತ ಒಟ್ಟು 2,41,000 ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.
ವಿಟ್ಲ ಕಡೆಯಿಂದ ಉಪ್ಪಿನಂಗಡಿಯ ಸಾರ್ವಜನಿಕರಿಗೆ ಹಾಗೂ ಕಾಲೇಜಿನ ಮಕ್ಕಳಿಗೆ ಗಾಂಜಾ ಮಾರಾಟ ಮಾಡಲು ಗಾಂಜಾ ತೆಗೆದುಕೊಂಡು ಬರುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಐ ನಂದಕುಮಾರ್ ಹಾಗೂ ಠಾಣಾ ಸಿಬ್ಬಂದಿ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನ ಮೈದಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ
Click this button or press Ctrl+G to toggle between Kannada and English