[1]ಬೆಂಗಳೂರು: ನ್ಯಾಯಮೂರ್ತಿ ಎಸ್.ಜೆ.ಸದಾಶಿವ ಆಯೋಗದ ವರದಿಯ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಚರ್ಚೆ ನಡೆಸಿದರು.
ಆಯೋಗದ ವರದಿಯನ್ನು ಅಧ್ಯಯನ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದರು.
ಸಮಾಜಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಹೆಚ್.ಆಂಜನೇಯ , ಆರ್.ಬಿ.ತಿಮ್ಮಾಪುರ , ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ , ಸಂಸದರಾದ ಎಲ್.ಹನುಮಂತಯ್ಯ ಹಾಗೂ ಚಂದ್ರಪ್ಪ , ಶಾಸಕರಾದ ಧರ್ಮಸೇನ, ಮಾಜಿ ಸಚಿವ ಆಲ್ಕೋಡ ಹನುಮಂತಪ್ಪ , ನಿವೃತ್ತ ಐಎಎಸ್ ಅಧಿಕಾರಿ ವೆಂಕಟಯ್ಯ, ನ್ಯಾಯಮೂರ್ತಿ ಎಸ್.ಜೆ.ಸದಾಶಿವ ಆಯೋಗದ ಹೋರಾಟ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.