[1]ಬೆಂಗಳೂರು: ದಕ್ಷಿಣ ವಿಭಾಗ ಡಿಸಿಪಿ ಆಗಿ ಅಣ್ಣಾಮಲೈ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಖಡಕ್ ಆಫೀಸರ್ ಅಂತಾನೇ ಫೇಮಸ್ ಆಗಿರುವ ಅಣ್ಣಾಮಲೈ ಅವರನ್ನು ರಾಜ್ಯ ಸರ್ಕಾರ ಸಿಟಿಗೆ ಚಾರ್ಜ್ ತೆಗೆದುಕೊಳ್ಳುವಂತೆ ಸೂಚಿಸಿದೆ. ಇನ್ನು ನಿರ್ಗಮಿತ ಡಿಸಿಪಿ ಡಾ. ಶರಣಪ್ಪ ಎಸ್.ಡಿ. ಅವರು ಅಣ್ಣಾಮಲೈ ಅವರನ್ನು ಸ್ವಾಗತಿಸಿದ್ದಾರೆ.
ಇನ್ನು ಅಣ್ಣಾಮಲೈ ಅಧಿಕಾರ ಸ್ವೀಕಾರ ಮಾಡಿದ ದಿನವೇ ಎಲ್ಲಾ ಠಾಣೆಗಳಿಗೆ ತೆರಳಿ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ದಾರೆ.