ಜೂಜಾಟ ಆಡುತ್ತಿದ್ದ 13 ಮಂದಿ ಸಿಸಿಬಿ ಪೊಲೀಸರ ವಶಕ್ಕೆ

11:15 AM, Wednesday, October 31st, 2018
Share
1 Star2 Stars3 Stars4 Stars5 Stars
(No Ratings Yet)
Loading...

policeಮಂಗಳೂರು: ನಗರದ ಕೂಳೂರು ಎಂಬಲ್ಲಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 13 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಿತ್ಯಾನಂದ ಶೆಟ್ಟಿ, ಸುಜಯ್ ಎಸ್ ಶೆಟ್ಟಿ, ಲ್ಯಾನ್ಸಿ ಡಿಸೋಜ, ಕಾರ್ತಿಕ್ ದಿನೇಶ್ ಅಂಚನ್, ರಘು ಎನ್ ಕೆ, ಅವಿನಾಶ್, ಮಹೇಶ್ ಕುಮಾರ್ ಶೆಟ್ಟಿ, ದೀಕ್ಷಿತ್ ಕುಮಾರ್, ಗಣೇಶ್ ಕುಮಾರ್, ದೀಪಕ್ ಶೆಟ್ಟಿ, ಮುಹಮ್ಮದ್ ಮುಸ್ತಫಾ, ಕೌಶಿಕ್ ಗೌಡ, ಮುಹಮ್ಮದ್ ಹನೀಫ್ ಬಂಧಿತ ಆರೋಪಿಗಳು.

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಎಂಬಲ್ಲಿ ಜೂಜಾಟ ಆಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ಜೂಜಾಟದಲ್ಲಿ ನಿರತರಾಗಿದ್ದ 13 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಅವರಿಂದ 16,800 ರೂ. ನಗದು ಹಾಗೂ ಜೂಜಾಟಕ್ಕೆ ಉಪಯೋಗಿಸಿದ್ದ ಇಸ್ಪೀಟ್ ಕಾರ್ಡ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭ ಇನ್ನೋರ್ವ ಆರೋಪಿ ವಿಶ್ವಾಸ್ ಎಂಬಾತ ದಾಳಿ ಸಮಯ ಪರಾರಿಯಾಗಿದ್ದಾನೆ.

ಆರೋಪಿಗಳನ್ನು ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ಪೆಕ್ಟರ್ ಶಾಂತಾರಾಮ, ಪಿಎಸ್ಸೈಗಳಾದ ಶ್ಯಾಮ ಸುಂದರ್, ಎಚ್ ಡಿ ಕಬ್ಬಾಳ್ ರಾಜ್ ಹಾಗೂ ಸಿಸಿಬಿ ಘಟಕದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English