ಬಿಜೆಪಿಗೆ ಬಿಗ್ ಶಾಕ್: ಡಿ.ಕೆ.ಸುರೇಶ್ ಜೊತೆ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಪತ್ರಿಕಾಗೋಷ್ಠಿಯಲ್ಲಿ ಪ್ರತ್ಯಕ್ಷ..!

10:50 AM, Thursday, November 1st, 2018
Share
1 Star2 Stars3 Stars4 Stars5 Stars
(No Ratings Yet)
Loading...

chandrashekarರಾಮನಗರ: ರಾಮನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಣದಿಂದಲೇ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಉಪಚುನಾವಣೆ ಹಿನ್ನೆಲೆಯಲ್ಲಿ ಚಂದ್ರಶೇಖರ್ ಗೆ ಟಿಕೆಟ್ ಕೊಟ್ಟಿದ್ದ ಬಿಜೆಪಿ ರಾಮನಗರದಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿತ್ತು. ನಿನ್ನೆಯವರೆಗೂ ಅಭ್ಯರ್ಥಿ ಪರ ಭಾರೀ ಪ್ರಚಾರ ಕೂಡ ನಡೆಸಲಾಗಿತ್ತು. ಆದ್ರೆ ಇಂದು ಬೆಳಿಗ್ಗೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಜೊತೆ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಪತ್ರಿಕಾಗೋಷ್ಠಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೇ ತಾನು ಚುನಾವಣ ಕಣದಿಂದಲೇ ಹಿಂದಕ್ಕೆ ಸರಿಯುತ್ತಿರುವುದಾಗಿ ಘೋಷಿಸಿದ್ದಾರೆ.

ಈ ಮೂಲಕ ಬಿಜೆಪಿಗೆ ರಾಷ್ಟ್ರೀಯ ಮಟ್ಟದಲ್ಲಿ ಬಿಗ್ ಶಾಕ್ ಕೊಟ್ಟಿದ್ದಾರೆ. ಬಿಜೆಪಿ ರಾಜ್ಯ ನಾಯಕರ ಮೇಲಿನ ಅಸಮಾಧಾನದಿಂದ ನಿವೃತ್ತಿ ಘೋಷಿಸಿದ್ದಾಗಿ ಹೇಳಿದ್ದಾರೆ. ಚುನಾವಣ ಪ್ರಚಾರಕ್ಕೆ ಯಡಿಯೂರಪ್ಪ ಸೇರಿ ಹಲವು ನಾಯಕರು ಆಸಕ್ತಿ ತೋರಿಲ್ಲ. ಹೀಗಾಗಿ ಇದರಿಂದ ನೋವಾಗಿ ಕಣದಿಂದ ಹಿಂದಕ್ಕೆ ಸರಿದಿದ್ದಾಗಿ ಹೇಳಿದ್ದಾರೆ. ಇನ್ನು ಇದ್ರ ಹಿಂದೆ ಕಾಂಗ್ರೆಸ್ ಮಾಸ್ಟರ್ ಮೈಂಡ್ ಡಿ.ಕೆ.ಶಿವಕುಮಾರ್ ಭರ್ಜರಿ ಗೇಮ್ ಪ್ಲ್ಯಾನ್ ಇರೋದು ಪಕ್ಕಾ ಆಗಿದೆ.

ಈ ಮೂಲಕ ಬಿಜೆಪಿಗೆ ಡಿಕೆಶಿ ಬ್ರದರ್ಸ್ ಭರ್ಜರಿ ಶಾಕ್ ಕೊಟ್ಟಿದ್ದಾರೆ. ಕಾಂಗ್ರೆಸ್ ನಲ್ಲೇ ಇದ್ದ ಚಂದ್ರಶೇಖರ್ ಸಮ್ಮಿಶ್ರ ಸರ್ಕಾರದ ಜೊತೆ ಅಸಮಾಧಾನ ಇದ್ದ ಕಾರಣ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English