ಇಂದಿನಿಂದ ರಾಜ್ಯಕ್ಕೆ ಹಿಂಗಾರು ಮಳೆ ಪ್ರವೇಶ

3:29 PM, Friday, November 2nd, 2018
Share
1 Star2 Stars3 Stars4 Stars5 Stars
(No Ratings Yet)
Loading...

bengaloreಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದಲೂ ಕೂಲ್ ಕೂಲ್ ವಾತಾವರಣ ಇದೆ. ಇದೇನಪ್ಪ ಮಳೆ ಬರೋ ಹಾಗಿದೆಯಲ್ಲ ಅಂತೆಲ್ಲ ನೀವು ಅನ್ಕೊಂಡ್ರೆ ನಿಮ್ಮ ಊಹೆ ಸರಿ.

ಹೌದು, ಇಂದಿನಿಂದ ಹಿಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಆಗಲಿದೆ. ನಿನ್ನೆಯೇ ಕೇರಳ ಹಾಗೂ ತಮಿಳುನಾಡಿಗೆ ಮಳೆಯಾಗಿದ್ದು, ಇಂದು ರಾಜ್ಯಕ್ಕೆ ಪ್ರವೇಶ ಆಗಲಿದೆ.

ದಕ್ಷಿಣ ಒಳನಾಡಿನ ಕೆಲವು ಭಾಗಗಳಾದ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ. ಶ್ರೀನಿವಾಸ ರೆಡ್ಡಿ ತಿಳಿಸಿದರು.

ಹಿಂಗಾರು ಮಳೆಯ ಮೋಡ ರಚನೆ ಹಿನ್ನಲೆ ಚಳಿ ಪ್ರಮಾಣವೂ ಕಡಿಮೆಯಾಗಲಿದೆ. ಸದ್ಯ ಜೋರು ಮಳೆಯಾಗುವ ಸಾಧ್ಯತೆ ಕಡಿಮೆಯಿದ್ದು, ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು‌.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English