ಮಂಗಳೂರು: ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘರ್ಷಕ್ಕೆ ಕಾರಣವಾದ ಅಶ್ರಫ್ ಕಲಾಯಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಜಾಮೀನಿನ ಮೇಲೆ ಹೊರ ಬಂದ ಹಿನ್ನೆಲೆ ಆತನಿಗೆ ಫೇಸ್ಬುಕ್ ಪೇಜ್ವೊಂದರಲ್ಲಿ ಜೀವ ಬೆದರಿಕೆ ಒಡ್ಡಲಾಗಿದೆ.
ಅಶ್ರಫ್ ಕಲಾಯಿ ಹತ್ಯೆ ಪ್ರಕರಣದಲ್ಲಿ ಭರತ್ ಕುಮ್ಡೇಲ್ ಪ್ರಮುಖ ಆರೋಪಿಯಾಗಿದ್ದ. ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯಾದ ನಂತರ ಅಶ್ರಫ್ ಕಲಾಯಿ ಕೊಲೆ ನಡೆದಿತ್ತು. ಈ ಕೊಲೆ ಪ್ರಕರಣ ಬೆನ್ನತ್ತಿದ್ದ ಪೊಲೀಸರು ಬಜರಂಗದಳದ ಜಿಲ್ಲಾ ಮುಖಂಡ ಭರತ್ ಕುಮ್ಡೇಲನ್ನು ಬಂಧಿಸಿದ್ದರು.
ಭರತ್ ಎರಡು ದಿನಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದು, ಇದೀಗ ಆತನಿಗೆ ಜೀವ ಬೆದರಿಕೆ ಒಡ್ಡುವಂತಹ ಪೋಸ್ಟ್ಅನ್ನು ಫೇಸ್ಬುಕ್ ಪೇಜ್ವೊಂದರಲ್ಲಿ ಹಾಕಲಾಗಿದೆ.
Click this button or press Ctrl+G to toggle between Kannada and English