ಉಪಚುನಾವಣಾ: ಐದರ ಪೈಕಿ ನಾಲ್ಕರಲ್ಲಿ ಮೈತ್ರಿ ಸರ್ಕಾರ ಅಭ್ಯರ್ಥಿಗಳಿಗೆ ಗೆಲುವು..!

11:43 AM, Tuesday, November 6th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

by-pollsಮಂಡ್ಯ: ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಈ ನಡುವೆ ಐದರಲ್ಲಿ ನಾಲ್ಕು ಕಡೆ ಮೈತ್ರಿ ಸರ್ಕಾರದ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದು ಬಾಕಿ ಇದೆ.

ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿಗೆ ಭರ್ಜರಿಯಾಗಿ ಗೆಲುವು ಸಾಧಿಸಿದರೇ ಇತ್ತ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ 1ಲಕ್ಷದ 82 ಸಾವಿರ ಮತಗಳ ಅಂತರದಿಂದ ಗೆದ್ದು ಅಂಬರೀಶ್ ದಾಖಲೆ ಮುರಿದಿದ್ದಾರೆ.

ಇನ್ನೊಂದೆಡೆ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ,ಎಸ್ ಉಗ್ರಪ್ಪ 2 ಲಕ್ಷ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಶಾಂತಾ ಅವರ ವಿರುದ್ದ ಭರ್ಜರಿ ಜಯ ಸಾಧಿಸಿದ್ದಾರೆ. ಹಾಗೆಯೇ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದು ನ್ಯಾಮಗೌಡ ಅವರ ಪುತ್ರ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಅವರು ಗೆಲವು ಸಾಧಿಸಿದ್ದಾರೆ. ಈ ನಾಲ್ಕು ಕ್ಷೇತ್ರಗಳ ಗೆಲುವಿನ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ.

ಶಿವಮೊಗ್ಗದಲ್ಲಿ ಬಹಳ ಫೈಟ್ ಇದ್ದು ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ದ ಮುನ್ನಡೆ ಸಾಧಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English