ರಾಜ್ಯ ಲೋಕಸಭೆಯ ಚುನಾವಣೆಗೂ ನಾವು ಒಟ್ಟಾಗಿ ಸ್ಪರ್ಧಿಸಲಿದ್ದೇವೆ: ಹೆಚ್​.ಡಿ. ದೇವೇಗೌಡ

3:09 PM, Tuesday, November 6th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

devegoudaಬೆಂಗಳೂರು: ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗಿದ್ದ ಮಿನಿ ಸಮರದಲ್ಲಿ ಮೈತ್ರಿ ಸರ್ಕಾರ ಭರ್ಜರಿ ಗೆಲುವು ಸಾಧಿಸಿದ್ದು, ಈ ಕುರಿತಂತೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಮೈತ್ರಿ ಸರ್ಕಾರದ ಗೆಲುವು ಇದಾಗಿದ್ದು, ಜನರ ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತ್ರ ಗೆದ್ದಿರುವ ಬಿಜೆಪಿ ಹೆಚ್ಚಿನ ಸಂತಸಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರೆಯಲಿದೆ ಎಂದಿರುವ ಹೆಚ್ಡಿಡಿ, ಈ ಕುರಿತಾಗಿ ಎರಡೂ ಪಕ್ಷದ ಮುಖಂಡರು ಒಟ್ಟು ಸೇರಿ ಚುನಾವಣಾ ರೂಪುರೇಷೆ ಸಿದ್ಧಪಡಿಸುವುದಾಗಿ ಹೇಳಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English