- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಹಿಂದ್ರಾ ವಾಹನ ಪಲ್ಟಿ: ಓರ್ವ ಪೊಲೀಸ್ ಪೇದೆ ಸಾವು!

police [1]ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮಹಿಂದ್ರಾ ವಾಹನ ಪಲ್ಟಿಯಾದ ಪರಿಣಾಮ ಓರ್ವ ಪೊಲೀಸ್ ಪೇದೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಜೋಗಿ ಕ್ರಾಸ್ ಬಳಿ ನಡೆದಿದೆ.

ಘಟನೆಯಲ್ಲಿ ಚಾಲಕ ಮಂಜುಗೆ ಗಂಭೀರ ಗಾಯಗಳಾಗಿವೆ. ಇಂಡಿ ತಾಲೂಕಿನ ಅರ್ಜುಣಗಿ ಬಿಕೆ ಗ್ರಾಮದ ದ್ವಾರಕೀಶ್ ಹಣಮಂತ ದೇವಖಾತೆ ಮೃತಪಟ್ಟ ಪೊಲೀಸ್ ಪೇದೆ.ಇವರು ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಲೆಗೆ ಪೆಟ್ಟು ಹಾಗೂ ಕಾಲ್ಮುರಿತದಿಂದ ಗಾಯಗೊಂಡಿದ್ದ ಪೊಲೀಸ್ ಪೇದೆ, ಸಿಂದಗಿಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.