[1]ಕಲಬುರಗಿ: ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಹತ್ತಿರ ನಡೆದಿದೆ.
ಯಾದಗಿರಿ ತಾಲೂಕು ಯರಗೋಳ ಗ್ರಾಮದ ನಿವಾಸಿ ಹಳ್ಳೆಪ್ಪ (25) ಮೃತಪಟ್ಟ ಬೈಕ್ ಸವಾರನೆಂದು ಗುರುತಿಸಲಾಗಿದೆ. ಯರಗೋಳದಿಂದ ನಾಲವಾರ ಕಡೆ ಹಳ್ಳೆಪ್ಪ ಬೈಕ್ನಲ್ಲಿ ಹೊರಟ್ಟಿದ್ದ. ಈ ವೇಳೆ ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.