ಟ್ಯಾಂಕರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

10:16 AM, Saturday, November 24th, 2018
Share
1 Star2 Stars3 Stars4 Stars5 Stars
(No Ratings Yet)
Loading...

kadabaಕಡಬ: ಟ್ಯಾಂಕರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದ ನೆಲ್ಯಾಡಿ ಗ್ರಾಮದ ಆರ್ಲದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ಲಾರಿಯು ಮಗುಚಿ ಬಿದ್ದಿದೆ. ಕೊನಾಲು ಗ್ರಾಮದ ಕಡೆಂಬಿಲ ನಿವಾಸಿ ಅಣ್ಣಿ ಪೂಜಾರಿ ಎಂಬುವರ ಪುತ್ರ ಜಗದೀಶ್ (44) ಮೃತರು.

ಜಗದೀಶ್ ಬೈಕ್ನಲ್ಲಿ ನೆಲ್ಯಾಡಿಯಿಂದ ಮನೆಗೆ ಹೋಗುತ್ತಿದ್ದಾಗ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಟ್ಯಾಂಕರ್ ಬೈಕ್ಗೆ ಗುದ್ದಿದೆ. ಪರಿಣಾಮ ಜಗದೀಶ್ ಅವರ ದೇಹ ಛಿದ್ರಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಟ್ಯಾಂಕರ್ ಮಾರ್ಗ ಮಧ್ಯೆ ಮಗುಚಿ ಬಿದ್ದಿದ್ದು, ಸಂಚಾರದಲ್ಲಿ ವ್ಯತ್ಯಯವಾಗಿತ್ತು‌. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English