[1]ಬೆಂಗಳೂರು: ಸ್ಯಾಂಡಲ್ವುಡ್ ರೆಬೆಲ್ ಸ್ಟಾರ್, ಮಾಜಿ ಸಚಿವ ಅಂಬರೀಶ್ ನಿಧನರಾಗಿದ್ದಾರೆ ಅವರಿಗೆ 66 ವರ್ಷ ವಯಸ್ಸಾಗಿತ್ತು.
ಉಸಿರಾಟದ ತೊಂದರೆಯ ಕಾರಣ ಶನಿವಾರ ಸಂಜೆ ಬೆಂಗಳೂರಿನ ವಿಕ್ರಮ್ ಆಸ್ಪತ್ರೀಗೆ ದಾಖಲಾಗಿದ್ದ ಅಂಬರೀಶ್ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
1952ನೇ ಮೇ 25ರಂದು ಮಂಡ್ಯದ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದಲ್ಲಿ ಜನಿಸಿದ್ದ ಮಳವಳ್ಳಿ ಹುಚೇಗೌಡ ಅಮರನಾಥ್ (ಅಂಬರೀಶ್) ಪುಟ್ಟಣ್ಣ ಕಣಗಾಲ್ ನಿರ್ದೇಸನದ “ನಾಗರಹಾವು” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ಇತ್ತೀಚೆಗೆ ಅವರ ಅಭಿನಯದ “ಅಂಬಿ ನಿಂಗ್ ವಯಸ್ಸಾಯ್ತೋ” ಚಿತ್ರ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿತ್ತು.
ನಾಳೆ ಬೆಳಗ್ಗೆ 8 ಗಂಟೆಗೆ ಅಂಬರೀಶ್ ಪಾರ್ಥಿವ್ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅಂಬರೀಶ್ ಕುಟುಂಬದವರ ನಿರ್ಧಾರದಂತೆ ಬೆಂಗಳೂರಿನಲ್ಲೇ ಅಂತ್ಯಕ್ರಿಯೆ ನಡೆಯಲಿದೆ.