ಆರ್‌ಟಿಐ ಕಾರ್ಯಕರ್ತನ ಮೇಲೆ ಬಿಸಿನೀರು ಎರಚಿ ದಾಳಿ

10:09 AM, Wednesday, December 5th, 2018
Share
1 Star2 Stars3 Stars4 Stars5 Stars
(No Ratings Yet)
Loading...

ujiriಉಜಿರೆ: ಉಜಿರೆಯ ಆರ್‌ಟಿಐ ಕಾರ್ಯಕರ್ತ ಬಾಲಸುಬ್ರಹ್ಮಣ್ಯ ಭಟ್(41) ಎಂಬುವರ ಮೈಮೇಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿನುತಾ ರಜತ್ ಗೌಡ ಬಿಸಿ ನೀರು ಎರಚಿ ದಾಳಿ ನಡೆಸಿರುವ ಆರೋಪ ಪ್ರಕರಣ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.

ಉಜಿರೆ ಗ್ರಾಮದ ಮಲೆಬೆಟ್ಟಿನಲ್ಲಿರುವ ಉಪಾಧ್ಯಕ್ಷೆಯ ಮನೆಯಂಗಳದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ವಸತಿ ಯೋಜನೆಯಲ್ಲಿ ನಡೆದ ಅವ್ಯವಹಾರ ನಡೆದ ಬಗ್ಗೆ ಆರ್.ಟಿ.ಐ ಮೂಲಕ ದಾಖಲೆ ಪಡೆದು ಬಾಲಸುಬ್ರಹ್ಮಣ್ಯ ಭಟ್ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ತನಿಖೆ ವೇಳೆ ನಡೆಯುತ್ತಿದ್ದ ವೇಳೆ ಬೆಳ್ತಂಗಡಿ ತಾಲೂಕು ಪಂಚಾಯತ್ ಇಒ ಕುಸುಮಧರ್ ಮುಂದೆಯೇ ಉಪಾಧ್ಯಕ್ಷೆ ವಿನುತಾ ರಜತ್ ಗೌಡ ಬಿಸಿನೀರು ಎರಚಿ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯಿಂದ ಬಾಲಸುಬ್ರಹ್ಮಣ್ಯ ಭಟ್ ಮೈಮೇಲೆ ಬೆಂದ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English