ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಕಾರ್ತಿಕ ಮಾಸ ಸಂಭ್ರಮದ ಲಕ್ಷ ದೀಪೋತ್ಸವ

2:49 PM, Wednesday, December 5th, 2018
Share
1 Star2 Stars3 Stars4 Stars5 Stars
(No Ratings Yet)
Loading...

dharmastalaಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಸಂಭ್ರಮದ ಲಕ್ಷ ದೀಪೋತ್ಸವ ನಡೆಯುತ್ತಿದ್ದು, ಈ ದೀಪಗಳ ಉತ್ಸವದ ಸಡಗರವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸಿದ್ದಾರೆ.

ಡಾ‌. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ವಿವಿಧ ವಿಧಿ-ವಿಧಾನಗಳು ನೆರವೇರಿತು. ಹೊಸಕಟ್ಟೆ ಉತ್ಸವದ ಪ್ರಯುಕ್ತ ಶ್ರೀ ಮಂಜುನಾಥ ಸ್ವಾಮಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ವಸಂತಮಹಲ್ನ ಹೊಸಕಟ್ಟೆಗೆ ಸಾವಿರಾರು ಭಕ್ತ ವೃಂದದೊಂದಿಗೆ ಮೆರವಣಿಗೆ ಮಾಡಲಾಯಿತು.

ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನ, ಸಾಹಿತ್ಯ ಸಮ್ಮೇಳನ, ವಸ್ತು ಪ್ರದರ್ಶನವನ್ನು‌ ಆಯೋಜಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯದ ವಿವಿಧ ಕಡೆಗಳಿಂದ ಎರಡೂವರೆ ಸಾವಿರ ಕಲಾವಿದರು ಆಗಮಿಸಿದ್ದು, ಇಲ್ಲಿ ಕಲಾ ಲೋಕವೇ ಅನಾವರಣಗೊಂಡಿದೆ.

ಲಕ್ಷ ದೀಪೋತ್ಸವದ ಸಂಭ್ರಮದಲ್ಲಿ ಭಾಗಿಯಾಗಲು ಮತ್ತು ಮಂಜುನಾಥನ ದರ್ಶನ ಪಡೆಯಲು ನಾಡಿನೆಲ್ಲೆಡೆಯಿಂದ ಭಕ್ತ ಜನಸಾಗರ ಧರ್ಮಸ್ಥಳಕ್ಕೆ ಆಗಮಿಸುತ್ತಿದೆ.

dharmastala-2

dharmastala-3

dharmastala-4

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English