ಬಾಬರಿ ಮಸೀದಿ ಧ್ವಂಸ ದಿನ: ಮಂಗಳೂರಿನಲ್ಲಿಂದು ನಿರ್ಬಂಧಕಾಜ್ಞೆ

10:03 AM, Thursday, December 6th, 2018
Share
1 Star2 Stars3 Stars4 Stars5 Stars
(No Ratings Yet)
Loading...

mangaluruಮಂಗಳೂರು: ಬಾಬರಿ ಮಸೀದಿ ಧ್ವಂಸ ದಿನ‌ದ ಹಿನ್ನೆಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ ವಿಧಿಸಿ ಪೊಲೀಸ್ ಆಯಕ್ತರ ಆದೇಶ ಹೊರಡಿಸಿದ್ದಾರೆ.

ಬಾಬರಿ ಮಸೀದಿ ಧ್ವಂಸ ಪ್ರಕರಣದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆ ಕರಾಳ ದಿನ ಆಚರಿಸುವ ಹಾಗೂ ಕೆಲ ಸಂಘಟನೆ ವಿಜಯೋತ್ಸವ ಆಚರಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯಕ್ತ ಟಿ‌.ಆರ್.ಸುರೇಶ್ ನಿರ್ಬಂಧಕಾಜ್ಞೆ ಆದೇಶ ಹೊರಡಿಸಿದ್ದಾರೆ.

ಈ‌ ಹಿನ್ನೆಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಗೆ ಅನ್ವಯಿಸುವಂತೆ ಇಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ರತನಕ‌ ಯಾವುದೇ ಮೆರವಣಿಗೆ, ಪ್ರತಿಭಟನೆ, ಜಾಥಾ, ಮುಷ್ಕರ, ಧರಣಿ, ರಸ್ತೆ ರೋಕೋ ಮತ್ತು ಮುತ್ತಿಗೆ ನಡೆಸದಂತೆ ಕರ್ನಾಟಕ ಪೊಲೀಸ್ ಕಾಯ್ದೆ 35ರ ಅಡಿ ನಿರ್ಬಂಧಕಾಜ್ಞೆ ವಿಧಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English