ಮಾಜಿ ಸಚಿವ ವಿ.ಧನಂಜಯ್​ ಕುಮಾರ್ ಆರೋಗ್ಯ ಸ್ಥಿತಿ‌ ಗಂಭೀರ

10:13 AM, Thursday, December 6th, 2018
Share
1 Star2 Stars3 Stars4 Stars5 Stars
(No Ratings Yet)
Loading...

ex-ministerಮಂಗಳೂರು: ಕೇಂದ್ರದ ಮಾಜಿ ಸಚಿವರಾಗಿದ್ದ ವಿ.ಧನಂಜಯ ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವಿ. ಧನಂಜಯ ಕುಮಾರ್ ಅವರನ್ನು ಕೆಲ ತಿಂಗಳುಗಳಿಂದ ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಆರೋಗ್ಯ ತೀರಾ ಹದಗೆಟ್ಟಿದ್ದು, ಸದ್ಯ ಕೋಮಾ ಸ್ಥಿತಿಯಲ್ಲಿದ್ದಾರೆ. ಪರಿಸ್ಥಿತಿ ಸಂಪೂರ್ಣ ಬಿಗಡಾಯಿಸಿದ್ದು, ಧನಂಜಯ ಕುಮಾರ್ ಈಗ ಗುರುತು ಹಿಡಿಯಲಾರದಷ್ಟು ಕೃಶರಾಗಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ನಾಗರಿಕ ಮತ್ತು ವಿಮಾನಯಾನ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರು ಜವಳಿ ಸಚಿವರಾಗಿ ಮತ್ತು ಹಣಕಾಸು ಖಾತೆಯನ್ನೂ ನಿಭಾಯಿಸಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಟ್ಟಾ ಬೆಂಬಲಿಗರಾಗಿದ್ದ ಧನಂಜಯ್ ಕುಮಾರ್, ಯಡಿಯೂರಪ್ಪನವರು ಬಿಜೆಪಿ ತೊರೆದು ಕೆಜೆಪಿ ಸ್ಥಾಪಿಸಿದ್ದಾಗ ಕೆಜೆಪಿಗೆ ಸೇರಿ ಬಳಿಕ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಅನಂತರ ಮತ್ತೆ ರಾಜಕೀಯವಾಗಿ ಧನಂಜಕುಮಾರ್ ಮೇಲೇಳಲೇ ಇಲ್ಲ.

ಇತ್ತೀಚೆಗೆ ಧನಂಜಯ್ ಕುಮಾರ್ ಅವರಿಗೆ ಕಿಡ್ನಿ ಸಮಸ್ಯೆ ತೀವ್ರ ಉಲ್ಬಣಗೊಂಡಿದ್ದು, ಕಳೆದ ನಾಲ್ಕು ತಿಂಗಳಿಂದ ಅವರು ಕೋಮಾ ಸ್ಥಿತಿಯಲ್ಲಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English