[1]ಬೆಂಗಳೂರು: ಸಿದ್ಧಗಂಗಾ ಶ್ರೀಗಳ ಚಿಕಿತ್ಸೆಗಾಗಿ ಸರ್ಕಾರದ ವತಿಯಿಂದ ಏನು ವ್ಯವಸ್ಥೆ ಮಾಡಬೇಕೋ ಅದನ್ನೆಲ್ಲಾ ಮಾಡಿದ್ದೇವೆ ಎಂದು ಡಿಸಿಎಂ ಜಿ.ಪರಮೇಶ್ವರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿದ್ಧಗಂಗಾ ಶ್ರೀಗಳನ್ನು ನಿನ್ನೆ ಭೇಟಿ ಮಾಡಿದ್ದೇನೆ. ಅವರ ಆರೋಗ್ಯ ಸ್ಥಿರವಾಗಿದೆ. ಆದರೆ, ಚೆನ್ನೈನಿಂದ ಬಂದ ವೈದ್ಯರು ಇನ್ನೂ ಹೆಚ್ಚಿನ ಚಿಕಿತ್ಸೆ ನೀಡಬೇಕು ಅಂತ ತೀರ್ಮಾನಿಸಿದ್ದಾರೆ. ಈ ಬಗ್ಗೆ ಶ್ರೀಮಠದ ಸ್ವಾಮಿಗಳು ಚರ್ಚೆ ಮಾಡಿ ನನಗೂ ತಿಳಿಸಿದರು ಎಂದರು.
ಸಿಎಂ ಕುಮಾರಸ್ವಾಮಿ ಅವರು ಸಹ ಇದರ ಬಗ್ಗೆ ಗಮನ ಹರಿಸಲು ನನಗೆ ತಿಳಿಸಿದ್ದಾರೆ. ಈಗ ಏರ್ ಆಂಬುಲೆನ್ಸ್ನಲ್ಲಿ ಶ್ರೀಗಳು ಚೆನ್ನೈಗೆ ತೆರಳಿದ್ದಾರೆ. ಅವರ ಆರೋಗ್ಯ ಸುಧಾರಿಸಲಿ ಎಂದು ನಾನು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.
ಅವರ ಆರೋಗ್ಯದ ವಿಚಾರವಾಗಿ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ತಮಿಳುನಾಡು ಗೃಹ ಇಲಾಖೆಯೊಂದಿಗೆ ಸಂಹವನ ನಡೆಸಿದ್ದು, ಅಲ್ಲಿಯೂ ಸ್ವಾಮೀಜಿ ಅವರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿ ಅವರು ಆರೋಗ್ಯವಾಗಿ ಹಿಂತಿರುಗಲಿದ್ದಾರೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ಹೇಳಿದರು.