ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಕೇಂದ್ರ ನಯಾಪೈಸೆ ಕೊಟ್ಟಿಲ್ಲ: ಯು ಟಿ ಖಾದರ್

10:23 AM, Monday, December 10th, 2018
Share
1 Star2 Stars3 Stars4 Stars5 Stars
(No Ratings Yet)
Loading...

u-t-khaderಮಂಗಳೂರು: ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಉಂಟಾಗಿ ಸಾವಿರಾರು ಕೋಟಿ ರೂಪಾಯಿ ನಷ್ಟವಾದರೂ ಕೇಂದ್ರ ಸರ್ಕಾರ ಈವರೆಗೆ ನಯಾಪೈಸೆ ಕೊಟ್ಟಿಲ್ಲವೆಂದು ಸಚಿವ ಯು ಟಿ‌ ಖಾದರ್ ಹೇಳಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎನ್‌ಡಿಆರ್ಎಫ್ ನಿಂದ ರಾಜ್ಯದ 8 ಜಿಲ್ಲೆಗಳಿಗೆ 546 ಕೋಟಿ ರೂಪಾಯಿ ನೀಡಲಾಗಿದೆ. ಸರಾಸರಿ ಲೆಕ್ಕ ಹಾಕಿದರೆ ಒಂದು ಜಿಲ್ಲೆಗೆ 60 ಕೋಟಿ ಸಿಗುತ್ತದೆ. 60 ಕೋಟಿಯಲ್ಲಿ ಸಂಪಾಜೆ ರಸ್ತೆ ಸರಿಮಾಡಲಾದರೂ ಸಾಧ್ಯವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಕೊಡಗು ಜನತೆ ಮನೆ ಮಠ ಕಳೆದುಕೊಂಡಿದ್ದಾರೆ. ರಾಜ್ಯ ಸರ್ಕಾರ ಮಾನವೀಯತೆಯ ಆಧಾರದಲ್ಲಿ 9 ಲಕ್ಷದ ಮನೆಯನ್ನು ಕಟ್ಟಿಕೊಡುತ್ತಿದೆ. ಮನೆ ಆಗುವವರೆಗೆ ಪ್ರತಿ ತಿಂಗಳು ಹತ್ತು ಸಾವಿರ ಬಾಡಿಗೆಯನ್ನೂ ನೀಡುತ್ತದೆ. ಅದಕ್ಕೆ ಕೂಡ ಕೇಂದ್ರ ನಯಾಪೈಸೆ ಕೊಟ್ಟಿಲ್ಲ. ಕೊಡಗು ಬಗ್ಗೆ ಕಾಳಜಿಯಿದ್ದರೆ ಪ್ರತಾಪ್ ಸಿಂಹ ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಲಿ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English