- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸರಗಳ್ಳರ ಬಂಧನ: 3.50 ಲಕ್ಷ ರೂ. ಚಿನ್ನಾಭರಣ, ಆ್ಯಕ್ಟಿವಾ ವಶಕ್ಕೆ

police [1]ಮಂಗಳೂರು: ಮಹಿಳೆಯರ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ರೌಡಿನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಜೆಪ್ಪು ಬಪ್ಪಾಲದ ಹರೀಶ್ ಎಸ್. ನಾಥ್(45), ಬಜಾಲ್ನ ರಾಜೇಶ್(45) ಬಂಧಿತ ಆರೋಪಿಗಳು. ಬಂಧಿತರಿಂದ 3,64,000 ರೂ. ಮೌಲ್ಯದ 126.960 ಗ್ರಾಂ ಚಿನ್ನಾಭರಣ ಸಹಿತ ಒಂದು ಆ್ಯಕ್ಟಿವಾ ಸ್ಕೂಟರ್ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಆ್ಯಕ್ಟಿವಾ ಸ್ಕೂಟರ್ನಲ್ಲಿ‌ ಬಂದು ನಡೆದುಕೊಂಡು ಹೋಗುತ್ತಿರುವ ಮಹಿಳೆಯರ ಕತ್ತಿನಲ್ಲಿದ್ದ ಚಿನ್ನದ ಸರಗಳನ್ನು ಸುಲಿಗೆ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಉರ್ವ ಪೊಲೀಸ್ ಠಾಣೆಯಲ್ಲಿ1 ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಕದ್ರಿ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಾವೂರು ಠಾಣೆಯಲ್ಲಿ 1 ಪ್ರಕರಣ ಮತ್ತು ದಕ್ಷಿಣ ಠಾಣೆಯಲ್ಲಿ 2 ಸುಲಿಗೆ ಯತ್ನ ಪ್ರಕರಣಗಳು ದಾಖಲಾಗಿವೆ.