[1]ಬೆಂಗಳೂರು: ಅಕ್ರಮ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 33 ಜನರನ್ನು ಬಂಧಿಸಿ, 62,549 ರೂ.ನಗದು ಹಣ ವಶಪಡಿಸಿಕೊಂಡಿದ್ದಾರೆ.
ವಿದ್ಯಾರಣ್ಯಪುರದ ತಿಂಡ್ಲು ಮುಖ್ಯರಸ್ತೆಯಲ್ಲಿರುವ ಸುಜಿತ್ ಸ್ಪೋರ್ಟ್ ಆ್ಯಂಡ್ ರಿಕ್ರಿಯೇಷನ್ ಅಸೋಸಿಯೇಷನ್ ಮೇಲೆ ಗುರುವಾರ ದಾಳಿ ಮಾಡಿ ಜೂಜಾಟ ಆಡುತ್ತಿದ್ದವರನ್ನು ಬಂಧಿಸಿರುವುದಾಗಿ ಸಿಸಿಬಿ ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ನಗರದ ಸುಜಿತ್ ಸ್ಪೋರ್ಟ್ಸ್ನಲ್ಲಿ ಜೂಜು ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿ ಬಂಧಿಸಿದ್ದಾರೆ. ದಾಳಿ ವೇಳೆ ಒಟ್ಟು 62,540 ರೂ. ಹಣ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.