- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಫೇಲ್‌ ಡೀಲ್‌ ಅರ್ಜಿ ವಜಾದಿಂದ ಕಾಂಗ್ರೆಸ್​ಗೇ ಅವಮಾನ: ಬಿ.ಎಸ್.ಯಡಿಯೂರಪ್ಪ

yedyurappa [1]ಬೆಳಗಾವಿ: ರಫೆಲ್‌ ಡೀಲ್‌ ತನಿಖೆಗೆ ಒತ್ತಾಯಿಸಿದ್ದ ಅರ್ಜಿ ವಜಾ ಆಗಿದೆ. ಇದು ಕಾಂಗ್ರೆಸ್ಗೆ ಅವಮಾನಕರ ಬೆಳವಣಿಗೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಅರ್ಜಿ ವಜಾಗೊಳಿಸಿರುವುದು ಸಂತಸ ತಂದಿದೆ. ಪ್ರಧಾನಿಯವರನ್ನು ರಾಜಕೀಯವಾಗಿ ಮುಳುಗಿಸುವ ಪ್ರಯತ್ನ ಕಾಂಗ್ರೆಸ್ನಿಂದ ನಡೆದಿದೆ. ರಫೆಲ್ ಡೀಲ್ನಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಇದೇ ತೀರ್ಪನ್ನು ನಿರೀಕ್ಷೆ ಮಾಡಿದ್ದೆವು. ನಿರೀಕ್ಷೆಯಂತೆ ಸುಪ್ರೀಂಕೋರ್ಟ್ ತೀರ್ಪು ಕೊಟ್ಟಿದೆ ಎಂದು ಯಡಿಯೂರಪ್ಪ ಹೇಳಿದ್ರು.