[1]ಮಂಗಳೂರು: ನಗರದ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿವೋರ್ವ ನೇಣಿಗೆ ಶರಣಾಗಿರುವ ಘಟನೆ ಕೃಷ್ಣರಾಜಪೇಟೆಯಲ್ಲಿ ನಡೆದಿದೆ.
ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಅಮೃತೇಶ್(22) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲವು ದಿನಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಎನ್ನಲಾದ ಅಮೃತೇಶ್ ಜೀವನದಲ್ಲಿ ಜಿಗುಪ್ಸೆ ಅನುಭವಿಸುತ್ತಿದ್ದ ಎಂದು ತಿಳಿದುಬಂದಿದೆ.
ಮಂಗಳವಾರ ಮಧ್ಯಾಹ್ನ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಮೃತೇಶ್ ಮೃತದೇಹವನ್ನು ಇಂದು ಬೆಳಗ್ಗೆ ತಗಡೂರು ಗ್ರಾಮಕ್ಕೆ ಕೊಂಡೊಯ್ಯಲಾಗಿದೆ.