ರಾಮಲಿಂಗಾರೆಡ್ಡಿ, ಬಿ.ಸಿ.ಪಾಟೀಲ್​​ ಅಸಮಾಧಾನ ಸ್ವಾಭಾವಿಕ: ಪರಮೇಶ್ವರ್

5:25 PM, Saturday, December 22nd, 2018
Share
1 Star2 Stars3 Stars4 Stars5 Stars
(No Ratings Yet)
Loading...

parameshwarದೇವನಹಳ್ಳಿ: ಸಚಿವ ಸ್ಥಾನ ಹಂಚಿಕೆ ವೇಳೆ ಸ್ವಾಭಾವಿಕವಾಗಿ ಅಸಮಾಧಾನ ಇದ್ದೆ ಇರುತ್ತೆ. ಇವೆಲ್ಲವೂ ಸರಿ ಹೋಗುತ್ತೆ ಎಂದು ಡಿಸಿಎಂ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಡಿಸಿಎಂ ಪರಮೇಶ್ವರ್ ಏರ್ಪೋರ್ಟ್ನಲ್ಲಿ ಮಾತನಾಡಿ, ವರಿಷ್ಠರು ಆರು ಸ್ಥಾನಗಳ ಜತೆಗೆ ಇಬ್ಬರ ಹೆಸರನ್ನು ಡ್ರಾಪ್ ಮಾಡಿ ಎಂಟು ಶಾಸಕರಿಗೆ ಸಚಿವ ಸ್ಥಾನ ನೀಡಲು ಸಮ್ಮತಿಸಿದ್ದಾರೆ.. ರಾಮಲಿಂಗಾರೆಡ್ಡಿ ಹಾಗೂ ಬಿಸಿ ಪಾಟೀಲ್ಗೆ ಸಚಿವ ಸ್ಥಾನ ತಪ್ಪಿದ ಹಿನ್ನೆಲೆ ಅವರು ಅಸಮಾಧಾನ ವ್ಯಕ್ತಪಡಿಸುವುದು ಸಾಮಾನ್ಯ. ಇವೆಲ್ಲವೂ ಸರಿ ಹೋಗುತ್ತದೆ ಎಂದರು.

ಸಚಿವ ಸಂಪುಟ ವಿಸ್ತರಣೆಯಿಂದ ಕಾಂಗ್ರೆಸ್ ಪಾರ್ಟಿ ಮೇಲೆ ಪರಿಣಾಮ ಬಿರುತ್ತೆ ಎಂಬ ಯಡಿಯೂರಪ್ಪ ಹೇಳಿಕೆಗೆ, ಬಿಎಸ್ವೈ ನಮ್ಮ ಪಕ್ಷಕ್ಕೆ ಸೇರಲಿ ಎಂದು ಪರಮೇಶ್ವರ್ ಆಹ್ವಾನ‌ ನೀಡಿ ತಿರುಗೇಟು ನೀಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English