ಅಕ್ರಮ ಮರಳುಗಾರಿಕೆ: 12ಕ್ಕೂ ಅಧಿಕ ಬೋಟುಗಳ​ ವಶ

12:56 PM, Saturday, December 29th, 2018
Share
1 Star2 Stars3 Stars4 Stars5 Stars
(No Ratings Yet)
Loading...

sand-miningಮಂಗಳೂರು: ಸಿಆರ್‌ಝೆಡ್ ವ್ಯಾಪ್ತಿಯ ಜಪ್ಪಿನಮೊಗರು, ಹರೇಕಳ ಎಂಬಲ್ಲಿ ಪರವಾನಿಗೆಯಿಲ್ಲದೆ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ 12ಕ್ಕೂ ಅಧಿಕ ಬೋಟ್ಗಳನ್ನು ವಶಪಡಿಸಿಕೊಂಡಿದ್ದಾರೆ.

ದ.ಕ. ಜಿಲ್ಲೆಯ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮರಳುಗಾರಿಕೆ ನಡೆಸಲು 76 ಮಂದಿಗೆ ಪರವಾನಿಗೆ ನೀಡಲಾಗಿತ್ತು. ಆದರೆ ಕೆಲವರು ಪರವಾನಿಗೆಯಿಲ್ಲದೆ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕಾರ್ಯಾಚರಣೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಈ‌ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ, ಕಂದಾಯ ಇಲಾಖೆ ಅಧಿಕಾರಿಗಳು ಶುಕ್ರವಾರ ಹರೇಕಳ, ಜಪ್ಪಿನಮೊಗರುವಿನ ಮರಳುಗಾರಿಕೆ ಪ್ರದೇಶಕ್ಕೆ ದಾಳಿ ನಡೆಸಿ, 12 ದೋಣಿಗಳನ್ನು ವಶಪಡಿಸಿಕೊಂಡು ಜಪ್ಪಿನಮೊಗರುವಿನಲ್ಲಿರುವ ಜಿಲ್ಲಾಡಳಿತ ಯಾರ್ಡ್‌ಗೆ ಸ್ಥಳಾಂತರಿಸಲಾಗಿದೆ.

ಅಧಿಕಾರಿಗಳನ್ನು ಕಂಡ ಕಾರ್ಮಿಕರು ಪರಾರಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಜಿಯೋಲಾಜಿಸ್ಟ್ ಪದ್ಮಶ್ರೀ, ಮೂರ್ತಿ, ಕಂದಾಯ ಇಲಾಖೆಯ ಸಹಾಯಕ ಕಮಿಷನರ್ ರವಿಚಂದ್ರ ನಾಯಕ್, ಗ್ರಾಮಾಂತರ ಠಾಣಾ ಪೊಲೀಸರು ಭಾಗಿಯಾಗಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English