[1]ಮಾಣಿಲ : ಪರಮ ಪೂಜ್ಯ ಯೋಗೀ ಕೌಸ್ತುಭ ಕರ್ಮಯೋಗಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರ್ಷಾವಧಿ ನೇಮೋತ್ಸವ ಜನವರಿ 5 ಶನಿವಾರ ನಡೆಯಿತು.
ಸಂಜೆ ಅಣ್ಣಪ್ಪ ಪಂಜುರ್ಲಿ ದೈವಗಳ ನೇಮೋತ್ಸವ ನಡೆದರೆ ಮಧ್ಯ ರಾತ್ರಿಯಿಂದ ಬೆಳಗ್ಗಿನ ಜಾವದ ವರೆಗೆ ಕಲ್ಲುರ್ಟಿ ದೈವದ ನೇಮೋತ್ಸವ ನಡೆಯಿತು.
[2]ಅದೇ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯನ್ನು ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಟ್ರಸ್ಟಿಗಳಾದ ಭಾಸ್ಕರ ಶೆಟ್ಟಿ ಪೂನೆ, ದಯಾನಂದ ಬಂಗೇರ ಮುಂಬಯಿ, ರಾಜೇಶ್ ಪಾಟೀಲ್ ಮುಂಬಯಿ, ಉಮೇಶ್ ಬೆಂಗಳೂರು, ಮಹೇಶ್ ಬೆಂಗಳೂರು, ಪ್ರಕಾಶ್ ಹಾಗೂ ತಿಮ್ಮಪ್ಪ ಬೆಂಗಳೂರು ಉಪಸ್ಥಿತರಿದ್ದರು.
ಶ್ರೀ ಮಹಾಲಕ್ಷ್ಮೀ ದೇವರ ಹೊಸ ವರ್ಷದ ಕ್ಯಾಲೆಂಡರನ್ನು ವೇದಿಕೆಯಲ್ಲಿದ್ದ ಅತಿಥಿಗಳು ಬಿಡುಗಡೆಗೊಳಿಸಿದರು, ಬಳಿಕ ಪ್ರವೀಣ್ ಮರ್ಕಮೆ ಮತ್ತು ಬಳಗದವರಿಂದ ‘ಕುಸಲ್ದ ಕುರ್ಲರಿ’ ಹಾಸ್ಯ ಕಾರ್ಯಕ್ರಮ ನಡೆಯಿತು.