ಮಂಗಳೂರು : ಬಿಜೆಪಿ ಆರಂಭಿಸಿರುವ ರೆಸಾರ್ಟ್ ರಾಜಕೀಯವನ್ನು ಖಂಡಿಸಿ ಗುರುವಾರ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಲ್ಲಿಕಟ್ಟೆಯಲ್ಲಿರುವ ಪಕ್ಷದ ಜಿಲ್ಲಾ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಜನತೆಯ ಆಶೋತ್ತರಗಳನ್ನು ಈಡೇರಿಸಲು ಅತ್ಯುತ್ತಮ ಯೋಜನೆಗಳ ಮೂಲಕ ಆಡಳಿತ ನಡೆಸುತ್ತಿವೆ. ಇದನ್ನು ಸಹಿಸದ ಬಿಜೆಪಿ ಅಧಿಕಾರದ ಲಾಲಾಸೆಗಾಗಿ ಶಾಸಕರನ್ನು ರೆಸಾರ್ಟ್ಗಳಲ್ಲಿ ಕೂಡಿಟ್ಟು ಸರಕಾರ ಉರುಳಿಸಲು ಪ್ರಯತ್ನಿಸುತ್ತಿದೆ. ಇದು ಎಂದಿಗೂ ಫಲಿಸದು ಎಂದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಯುವ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಮಿಥುನ್ ರೈ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್, ಪಕ್ಷದ ಹಿರಿಯ ನಾಯಕ ಕಳ್ಳಿಗೆ ತಾರನಾಥ ಶೆಟ್ಟಿ, ಕಾರ್ಪೊರೇಟರ್ಗಳಾದ ಪುರುಷೋತ್ತಮ ಚಿತ್ರಾಪುರ, ನವೀನ್ ಡಿಸೋಜ, ಸಬಿತಾ ಮಿಸ್ಕಿತ್ ಮತ್ತಿತರರು ಪಾಲ್ಗೊಂಡಿದ್ದರು.
Click this button or press Ctrl+G to toggle between Kannada and English