ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ವಾಹನ, ಕಚೇರಿಯ ಚರ ವಸ್ತುಗಳನ್ನು ಜಪ್ತಿ ಮಾಡುವಂತೆ ಪುತ್ತೂರು ಪ್ರಧಾನ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.
ಪುತ್ತೂರು ತಾಲೂಕು ಕಬಕ ವಿದ್ಯಾಪುರ ಸರ್ಕಾರಿ ಶಾಲೆಯಲ್ಲಿ 2010 ಮಾರ್ಚ್ 4 ರಂದು ಅಕ್ಷರ ದಾಸೋಹ ಕಟ್ಟಡದ ಲಿಂಟೆಲ್(ಕಿಟಕಿಯ ಕಲ್ಲು ಹಾಸು) ಬಿದ್ದು 9 ನೇ ತರಗತಿ ವಿದ್ಯಾರ್ಥಿ ಶಾರುಕ್ ಖಾನ್ ಮೃತಪಟ್ಟಿದ್ದ. ಈ ಬಗ್ಗೆ ಬಾಲಕನ ತಂದೆ ಅಬ್ದುಲ್ ಖಾದರ್ ಅವರು ಪರಿಹಾರ ಕೋರಿ ಸರ್ಕಾರಿ ಶಾಲೆ ಮತ್ತು ಗುತ್ತಿಗೆದಾರರ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಆಗ ಬಾಲಕನ ಪೋಷಕರಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು.
ಕೋರ್ಟ್ ತೀರ್ಪು ನೀಡಿ 8 ತಿಂಗಳು ಕಳೆದರೂ ಸರ್ಕಾರದಿಂದ ಪರಿಹಾರ ಸಿಗದ್ದಕ್ಕೆ ಅರ್ಜಿದಾರರು ಮತ್ತೆ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಜಿಲ್ಲಾಧಿಕಾರಿ ಕಚೇರಿ ಜಪ್ತಿಗೆ ಆದೇಶಿಸಿದೆ.
Click this button or press Ctrl+G to toggle between Kannada and English