ಪ್ರೇಮಿಗಳ ದಿನ ವಿರೋಧಿಸಿ ಗುಲಾಬಿ ಅಂಗಡಿಗೆ ದಾಳಿ ಇಟ್ಟ ಬಜರಂಗದಳದ ಕಾರ್ಯಕರ್ತರ 

1:13 AM, Friday, February 15th, 2019
Share
1 Star2 Stars3 Stars4 Stars5 Stars
(No Ratings Yet)
Loading...

Roseಮಂಗಳೂರು : ಪ್ರೇಮಿಗಳ ದಿನವನ್ನು ವಿರೋಧಿಸಿ ಬಜರಂಗದಳದ ಕಾರ್ಯಕರ್ತರು ಅಂಗಡಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಬೈಕಿನಲ್ಲಿ ಬಂದ ಬಜರಂಗದಳದ ಕಾರ್ಯಕರ್ತರು ಎಂದು ಹೇಳಲಾಗುವ ಯುವಕರ ಗುಂಪೊಂದು ಹೂ ಗುಚ್ಛ ಮಾರಾಟ ಮಾಡುವ ಅಂಗಡಿಯೊಂದರ ಮೇಲೆ ದಾಳಿ ನಡೆಸಿದೆ. ನಗರದ ಕರಂಗಲಪಾಡಿ ಬಳಿ ಈ ಘಟನೆ ನಡೆದಿದೆ.

ಕರಂಗಲಪಾಡಿ ವೃತ್ತದ ಬಳಿಯೇ ಇರುವ ಐರೀಶ್ ಹೂ ಗುಚ್ಛ ತಯಾರಿಸಿ ಕೊಡುವ ಅಂಗಡಿ ಮೇಲೆ ದಾಳಿ ನಡೆಸಲಾಗಿದೆ. ವ್ಯಾಲೆಂಟೈನ್ ಡೇ ವಿರೋಧಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ್ದು, ಗುಲಾಬಿ ಹೂಗಳಿಂದ ಶೃಂಗಾರಗೊಂಡಿದ್ದ ಅಂಗಡಿಗೆ ಬಂದ ಯುವಕರ ಪಡೆ ದಾಂಧಲೆ ನಡೆಸಿದೆ.

ಹೂ ಕುಂಡಗಳಿಗೆ ಹಾನಿ ಮಾಡಿದ ಯುವಕರ ಪಡೆ ಕೃತ್ಯ ಎಸಗಿ ಪರಾರಿಯಾಗಿದೆ. ಕದ್ರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ನಡೆಸಿದ ಯುವಕರ ಬಂಧನಕ್ಕೆ ಬಲೆ ಬೀಸಲಾಗಿದೆ.

ಹಿಂದೂ ಸಂಘಟನೆಗಳಿಂದ ಪ್ರೇಮಿಗಳ ದಿನಾಚರಣೆಗೆ ವಿರೋಧವಾಗಿದ್ದ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ನಡೆಸಿತ್ತು. ಪ್ರೇಮಿಗಳು ದಿನದಂದು ಗಲಾಟೆಗೆ ಕಾರಣವಾಗಬಾರದೆಂದು ಪೊಲೀಸ್ ಇಲಾಖೆ ಮುಂಜಾಗ್ರತೆ ಕ್ರಮ ವಹಿಸಿತ್ತು. ಆದರೆ ಈ ನಡುವೆಯೂ ದಾಳಿ ನಡೆದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English