ಮಕ್ಕಳಿಲ್ಲದ ಕೊರಗಿನಿಂದ ಅಣ್ಣನ ಮಗಳಿಗೆ ಆಸ್ತಿ ಕೊಡುವಂತೆ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ

10:04 PM, Tuesday, February 19th, 2019
Share
1 Star2 Stars3 Stars4 Stars5 Stars
(No Ratings Yet)
Loading...

kotekar-deathಮಂಗಳೂರು : ಆಕಾಶವಾಣಿಯ ನಿವೃತ್ತ ಉದ್ಯೋಗಿ ಹಾಗೂ ಅವರ ಪತ್ನಿ ದೀರ್ಘಕಾಲದ ಅಸೌಖ್ಯ ಹಾಗೂ ಮಕ್ಕಳಿಲ್ಲದ ಕೊರಗಿನಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಕೋಟೆಕಾರು ಬೀರಿ ಎಂಬಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ವೃದ್ಧ ದಂಪತಿ ದೇವರಾಜ್ (74), ವಸಂತಿ (64) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಆಕಾಶವಾಣಿಯ ನಿವೃತ್ತ ಉದ್ಯೋಗಿ ದೇವರಾಜ್ ಗಾಣಿಗ ಹಲವಾರು ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಅದಲ್ಲದೇ ಪತ್ನಿ ವಸಂತಿ ಕೂಡ ಅಸೌಖ್ಯದಿಂದ ಬಳಲುತ್ತಿದ್ದು, ಕಳೆದ ರಾತ್ರಿ ನೇಣಿಗೆ ಶರಣಾಗಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ದೇವರಾಜ್ ಹಾಗೂ ವಸಂತಿ ಅವರು ಅಸೌಖ್ಯ ಹಾಗೂ ಮಕ್ಕಳಿಲ್ಲದ ಕೊರಗಿನಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.

ತಮ್ಮ ಆಸ್ತಿಯನ್ನು ವಸಂತಿ ಅವರ ಅಣ್ಣನ ಮಗಳಾದ ಶ್ವೇತಾಳಿಗೆ ನೀಡುವಂತೆ ಹಾಗೂ ತಾವು ಅತ್ಯಂತ ಪ್ರೀತಿಯಿಂದ ಸಾಕಿದ ನಾಯಿ, ಬೆಕ್ಕನ್ನು ನೋಡಿಕೊಳ್ಳುವಂತೆ ಡೆತ್ ನೋಟ್ ನಲ್ಲಿ ಬರೆದಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English