ಜಿಲ್ಲೆಯಲ್ಲಿ ಈ ಬಾರಿ ಮೋದಿ ಅಲೆ ವರ್ಕೌಟ್ ಆಗಲ್ಲ: ಮಧು ಬಂಗಾರಪ್ಪ

9:17 PM, Saturday, April 6th, 2019
Share
1 Star2 Stars3 Stars4 Stars5 Stars
(No Ratings Yet)
Loading...

Madhu Bangarappaಮಂಗಳೂರು :  ಬಿಜೆಪಿ ಜಿಲ್ಲೆಯಲ್ಲಿ ಮಾತ್ರವಲ್ಲದೇ, ರಾಜ್ಯದಲ್ಲಿ ನಿರ್ಮೂಲನೆಯಾಗಲಿದೆ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಮೋದಿ ಅಲೆ ವರ್ಕೌಟ್ ಆಗಲ್ಲ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಮಂಗಳೂರಿನಲ್ಲಿ ಪತ್ರಕರ್ತ  ರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪಗೆ ಸಿಎಂ ಸ್ಥಾನ ದೊರಕಿದಾಗ ತಮ್ಮ ಸ್ಥಾನ ಉಳಿಸಿಕೊಳ್ಳಲಾಗಿರಲಿಲ್ಲ. ಅವರು ಇದೀಗ ಕುಮಾರಸ್ವಾಮಿಯವರಿಗೆ ಮುಹೂರ್ತ ಇಡಲು ಮುಂದಾಗಿದ್ದಾರೆ. ಅವರ ಮುಹೂರ್ತರಿಂದ ಕರಾವಳಿಯಲ್ಲಿ ಬಿಜೆಪಿ ನಿರ್ನಾಮಗೊಳ್ಳಲಿದೆ. ಕರಾವಳಿಯಲ್ಲಿ ಬಿಜೆಪಿ ನಿರ್ಮೂಲನೆಯಾಗಬೇಕಿದೆ ಎಂದರು.

ಇನ್ನು ಶಿವಮೊಗ್ಗದಿಂದ ಮಧುಬಂಗಾರಪ್ಪ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆಯೂ ಶಿವಮೊಗ್ಗದಲ್ಲಿ ಘಟಾನುಘಟಿಗಳಿದ್ದರು. ಈ ಕ್ಷೇತ್ರದಲ್ಲಿ ಯಡಿಯೂರಪ್ಪ ಹಾಗೂ ಈಶ್ವರಪ್ಪ ಪೂರ್ತಿ ನೆಲಕಚ್ಚಿದ್ದರು. ಆ ಸಂದರ್ಭದಲ್ಲಿ ನನ್ನ ತಂದೆ ಬಂಗಾರಪ್ಪನವರಿಂದ ಬಿಜೆಪಿ ಗೆದ್ದಿತ್ತು ಎಂದರು. ಕಾಂಗ್ರೆಸ್ ನನಗೆ ಅವಕಾಶ ನೀಡಿ ಟಿಕೆಟ್ ಒದಗಿಸಿತು.

ಕಳೆದ ಚುನಾವಣೆಯಲ್ಲಿ ಯಡಿಯೂರಪ್ಪನವರು ಮೋದಿಯವರಿಂದಾಗಿ ಅಷ್ಟು ಮತ ಪಡೆದಿದ್ದರು. ಆದರೆ, ಬಳಿಕ ಅವರ ಗೆಲುವಿನ‌ ಮತದ ಪ್ರಮಾಣವೂ ಕಡಿಮೆಯಾಗಿದೆ. ಮೋದಿಯವರ ಅಲೆ ಕೂಡ ಕಡಿಮೆಯಾಗಿದೆ. ಅದಕ್ಕೆ ಗೆಲುವಿನ ಮತದ ಪ್ರಮಾಣ ಕಡಿಮೆಯಾಗಿದೆ. ಘಟಾನುಘಟಿಗಳು ಎಂದು ಹೇಳುವವರ ಮೌಲ್ಯ ಕೂಡಾ ಕಡಿಮೆಯಾಗಿದೆ ಎಂದರು.

ಶಿವಮೊಗ್ಗದಲ್ಲಿ ನಾನು ಯಡಿಯೂರಪ್ಪನವರನ್ನು ಕಟ್ಟಿ ಹಾಕಿದ್ದೇನೆ. ಹಿಂದೆ 52 ಸಾವಿರ ಮತದಿಂದ ನಾನು ಸೋತಿರಬಹುದು.ಆದರೆ, ನೈತಿಕವಾಗಿ ನಾನು ಗೆದ್ದಿದ್ದೇನೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English