ವಿಪಕ್ಷೀಯರು ಭ್ರಷ್ಟಾಚಾರದ ಮೂಲಕ ದೇಶದ ಸಂಪತ್ತನ್ನು ಕೊಳ್ಳೆ ಹೊಡೆದರು

4:38 PM, Monday, April 15th, 2019
Share
1 Star2 Stars3 Stars4 Stars5 Stars
(No Ratings Yet)
Loading...

Vijayasankalpa  ಮಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮತ್ತಿತರ ಪಕ್ಷಗಳು ವಂಶೋದಯದ ಬಗ್ಗೆಯೇ ಗಮನವನ್ನು ಕೇಂದ್ರೀಕರಿಸಿವೆ. ಆದರೆ ಬಿಜೆಪಿಯು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾ ನತೆಯ ಲಾಭ ದೊರೆಯಬೇಕೆಂಬ ಅಂತ್ಯೋದಯದ ತಣ್ತೀವನ್ನು ಹೊಂದಿದೆ. ವಂಶೋ ದಯದವರು ಅವರ ಕುಟುಂಬದ ಹಿತಾಸಕ್ತಿ ಯನ್ನೇ ನೋಡಿಕೊಳ್ಳುವರು. ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಂಗಳೂರಿನ ಕೇಂದ್ರ ಮೈದಾನದಲ್ಲಿ ಶನಿವಾರ ಬಿಜೆಪಿ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌-ಜೆಡಿಎಸ್‌ ಅವರ ಕುಟುಂಬಿಕರನ್ನು ಮಾತ್ರ ಅಧಿಕಾರಕ್ಕೆ ತರಲು ಯತ್ನಿಸುವರು ಎಂದರು.

ವಿಪಕ್ಷೀಯರು ಭ್ರಷ್ಟಾಚಾರದ ಮೂಲಕ ದೇಶದ ಸಂಪತ್ತನ್ನು ಕೊಳ್ಳೆ ಹೊಡೆದರು. ಸ್ವತಂತ್ರ ಭಾರತದ ಆರಂಭಿಕ ವರ್ಷಗಳಿಂದಲೇ ಇವರು ದೇಶದಲ್ಲಿ ಅರಾಜಕತೆ ಅಥವಾ ಆರ್ಥಿಕ ಸಂಕಷ್ಟ ಉಂಟು ಮಾಡುವ ಪ್ರಯತ್ನದಲ್ಲಿ ನಿರತರಾದರು ಎಂದು ಟೀಕಿಸಿದರು.

Vijayasankalpa  ಆದರೆ ಬಿಜೆಪಿಯ ಅಂತ್ಯೋದಯ ಭ್ರಷ್ಟಾಚಾರ ಮುಕ್ತ, ಸರ್ವರಿಗೂ ಸಮಪಾಲು- ಸಮಬಾಳು ಎಂಬ ಧ್ಯೇಯಕ್ಕೆ ಬದ್ಧವಾಗಿದೆ. ಪರಂಪರೆ, ಸಂಸ್ಕೃತಿ, ಸಂಪ್ರದಾಯಗಳನ್ನು ಮರೆತರೆ ಆ ದೇಶ ಸಾಂಸ್ಕೃತಿಕವಾಗಿ ಮುನ್ನಡೆ ಯಲು ಸಾಧ್ಯವಿಲ್ಲ. ದೇಶದ ಪರಂಪರೆಗೆ ಆದ್ಯತೆಯ ಬದ್ಧತೆಯನ್ನು ಬಿಜೆಪಿ ಹೊಂದಿದೆ ಎಂದು ಹೇಳಿದರು.

ಸಾಲುಮರ ತಿಮ್ಮಕ್ಕ ಪದ್ಮಶ್ರೀ ಪಡೆದುಕೊಂಡಾಗ ಮನ ತುಂಬಿ ಬಂತು. ಎಲೆ ಮರೆಯ ಕಾಯಿ ಯಂತಿದ್ದ ಸಾಲು ಮರ ತಿಮ್ಮಕ್ಕ ನಂತಹ ಸಾಮಾನ್ಯ ಜನರನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಇದು ಬಿಜೆಪಿ ಸರಕಾರದಲ್ಲಿ ಸಾಧ್ಯವಾಗಿದೆ. ರಾಮನಾಥ ಪುರಂ ನಿಂದ ಬಂದೆ,ಅಲ್ಲಿಮಾಜಿ ರಾಷ್ಟ್ರಪತಿ ದಿವಂಗತ ಡಾ ಕಲಾಂ ಅವರ ಸ್ಮಾರಕ‌ ನಿರ್ಮಿಸಿದ್ದೇವೆ. ಈ ಹಿಂದೆ ಯಾರೊಬ್ಬ ರಾಷ್ಟ್ರಪತಿಗೂ ಇಂತಹ ಗೌರವ ನೀಡಲಾಗಿಲ್ಲ. ಡಾ.ರಾಧಾಕೃಷ್ಣನ್ ಕರ್ನಾಟಕದವರು ಈ ರಾಜ್ಯ, ರಾಷ್ಟ್ರಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಆದರೆ ಅವರಿಗೆ ಸಲ್ಲಬೇಕಾದ ಗೌರವ ವನ್ನು ಕಾಂಗ್ರೆಸ್ ಸಲ್ಲಿಸಿಲ್ಲ ಎಂದು ಅವರು ಕುಟುಕಿದರು.

ಶಬರಿಮಲೆ ವಿಚಾರ ಪ್ರಸ್ತಾಪ ಮಾಡಿದ ಮೋದಿ ಇಂದು ಎಪ್ರಿಲ್ 13, ಜಲಿಯನ್ ವಾಲಾಬಾಗ್ ನರಮೇಧ ನಡೆದ ದುರಂತ ದಿನ . ಜಲಿಯನ್ ವಾಲಾಭಾಗ್ ಹತ್ಯಾಕಾಂಡ ವಾಗಿ ನೂರುವರ್ಷಗಳು ಸಂದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಹುತಾತ್ಮರನ್ನುಮೋದಿ ನೆನೆದು ಹುತಾತ್ಮರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಮಿಲಾವಟಿ ಜನರ ಮಹಾಘಟಬಂಧನ ನ ಭಾಗವಾಗಿರುವ ಕೇರಳದ ಕಮ್ಯೂನಿಸ್ಟ್ ಸರಕಾರದ ದಲ್ಲಿ. ಶಬರಿಮಲೆ ವಿಚಾರದಲ್ಲಿ ಪ್ರಥಮ ಬಾರಿಗೆ ಧ್ವನಿಯೆತ್ತಿರುವ ಮೋದಿ, ಕೇರಳದಲ್ಲಿ ಅಯ್ಯಪ್ಪನ ಹೆಸರೆತ್ತದ ಸ್ಥಿತಿ ನಿರ್ಮಾಣವಾಗಿದೆ. ಶಬರಿಮಲೆ ಹೆಸರು ಹೇಳಿದ್ರೆ ಜೈಲಿಗೆ ಕಳುಹಿಸಿದ್ದಾರೆ.ಬಿಜೆಪಿ ಅಭ್ಯರ್ಥಿಯನ್ನೂ ಜೈಲಿಗೆ ಕಳುಹಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Vijayasankalpa  ಈ ಹಿಂದಿನ ಸರಕಾರ 2014ರಲ್ಲಿ ಬ್ಯಾಂಕಿಂಗ್ ಕ್ಷೇತ್ರವನ್ನು ವೆಂಟಿಲೇಟರ್ ಸ್ಥಿತಿಗೆ ತಲುಪಿಸಿ ಹೋಗಿತ್ತು. ಸ್ವಾತಂತ್ರ ಭಾರತದಲ್ಲಿ ಕಳೆದ 60 ವರ್ಷದಲ್ಲಿ ಉದ್ಯಮಿ ಗಳಿಗೆ ಬ್ಯಾಂಕಗಳಿಂದ ನೀಡಲಾದ ಸಾಲದ ಪ್ರಮಾಣ ಹೋಲಿಸಿದರೆ ಕೇವಲ 2006ರಿಂದ 14 ರ ಅವಧಿಯಲ್ಲಿ ಎರಡು ಪಟ್ಟು ಸಾಲ ನೀಡಲಾಗಿತ್ತು. ಅದರಲ್ಲೂ ಕಮಿಷನ್ ಪಡೆದು ಬ್ಯಾಂಕಿಂಗನ್ನು ದಿವಾಳಿ ಎಬ್ಬಿಸಿದ್ದರು .ಆದರೆ ಈಗ ಬ್ಯಾಂಕಿಂಗ್ ಕ್ಷೇತ್ರ ಸುಸ್ಥತಿ ಅಭಿವೃದ್ಧಿಯ ಗತಿಯಲ್ಲಿದೆ ಎಂದು ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕೆಲವರು ದೇಶ ಬಿಟ್ಟು ಓಡುತ್ತಿದ್ದಾರೆ. ಆದರೆ, ಎಲ್ಲೇ ಓಡಿದರೂ ಈ ಚೌಕಿದಾರ ಮೋದಿ ಬಿಡಲ್ಲ ಅಂತಾ ಹೇಳಿದರು.

ಬಲಿಷ್ಠ ಮತ್ತು ಭ್ರಷ್ಟಾಚಾರ ಮುಕ್ತ ಹೊಸ ಭಾರತದ ನಿರ್ಮಾಣಕ್ಕಾಗಿ ರಾಷ್ಟ್ರೀಯ ಚಿಂತನೆಯ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳನ್ನೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಆಯ್ಕೆ ಮಾಡಿ ಎಂದರು.

ದೇಶ ರಕ್ಷಣೆಗೆ ಸೈನಿಕರು ಮಾಡುತ್ತಿರುವ ಸೇವೆಗೆ ವಿಪಕ್ಷೀಯರು ಸಾಕ್ಷ é ಕೇಳುತ್ತಿದ್ದಾರೆ. ಸೇನಾ ಮುಖ್ಯಸ್ಥರನ್ನೇ ನಿಂದಿಸುತ್ತಿದ್ದಾರೆ. ಇಂತಹ ವಿಕೃತ ಮನೋಭಾವದಿಂದ ಅವರು ದೇಶವನ್ನು ಸಂಕಷ್ಟಕ್ಕೆ ದೂಡಲು ಪ್ರಯತ್ನಿಸುತ್ತಿದ್ದಾರೆ. ಇವರಿಗೆ ನಾಚಿಕೆ ಯಾಗಬೇಕಲ್ಲವೇ ಎಂದು ಪ್ರಧಾನಿ ಮೋದಿ ಪ್ರಶ್ನಿಸಿದರು.

ಅಬ್ದುಲ್‌ ಕಲಾಂ, ಡಾ| ರಾಧಾಕೃಷ್ಣನ್‌ರಂತಹ ಅಪ್ರತಿಮ ಸಾಧಕರಿಗೆ ನಮ್ಮಲ್ಲಿ ಯಾವುದೇ ಸ್ಮಾರಕಗಳಿಲ್ಲ. ಈ ಎಲ್ಲ ವಿಚಾರಗಳನ್ನು ನಾವು ಗಮನಿಸಿದ್ದೇವೆ.

ಜಲಿಯನ್‌ವಾಲಾಬಾಗ್‌ ದುರಂತಕ್ಕೆ ಈಗ 100 ವರ್ಷ. ಅಂದು ಹುತಾತ್ಮರಾದವರಿಗೆಲ್ಲ ನಾನು ಶ್ರದ್ಧಾಂಜಲಿ ಸಮರ್ಪಿಸುತ್ತಿದ್ದೇನೆ ಎಂದರು.

Vijayasankalpa  ಮೀನುಗಾರರ ಹಿತರಕ್ಷಣೆಗೆ ಪ್ರತ್ಯೇಕ ಸಚಿವಾಲಯವನ್ನೇ ರಚಿಸಿದ್ದೇವೆ. ಆಳ ಸಮುದ್ರ ಮೀನುಗಾರಿಕೆಗೆ ಆಧುನಿಕ ತಂತ್ರಜ್ಞಾನ ಸಹಿತ ಹಲವು ನೆರವು ಕೊಡುತ್ತಿದ್ದೇವೆ. ಅಂತ್ಯೋದಯ, ಆಧಾರ್‌, ಜನಧನ, ಡಿಜಿಟಲ್‌ ಇತ್ಯಾದಿ ಸೇವೆಗಳು ಕ್ರಾಂತಿಕಾರಕ ಎಂದು ಜಗತ್ತೇ ಕೊಂಡಾಡುತ್ತಿದೆ ಎಂದರು.

ರಾಜಕೀಯ, ಚುನಾವಣೆ, ಅಧಿಕಾರ, ಸರಕಾರ ಇತ್ಯಾದಿಗಳ ಸಹಿತ ಪ್ರಬಲ ಮತ್ತು ಸಾಂಸ್ಕೃತಿಕ ವೈಭವದ ದೇಶ ಪ್ರಸ್ತುತವಾಗುತ್ತದೆ. ಕಳೆದ 5 ವರ್ಷಗಳಲ್ಲಿ ಇಂತಹ ನಿರ್ಣಾಯಕ ಕಾರ್ಯಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗಿಸಿದ ಕರ್ನಾಟಕ ಸಹಿತ ದೇಶದ ಜನತೆಗೆ ಮಂಗಳೂರಿನ ಈ ನೆಲದಿಂದ ತಾನು ಕೃತಜ್ಞತೆ ಅರ್ಪಿಸುವುದಾಗಿ ಮೋದಿ ವಿವರಿಸಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ವ್ಯಾಪ್ತಿಯಲ್ಲಿ ಕೂಡ ಅಪೂರ್ವ ಪರಂಪರೆಯಿದೆ. ಇದು ಬ್ಯಾಂಕಿಂಗ್‌ ಕ್ಷೇತ್ರದ ತವರೂರು. ಆದರೆ ಕಾಂಗ್ರೆಸ್‌ ಸಹಿತ ವಿಪಕ್ಷೀಯರು ಕಮಿಷನ್‌ ಆಧಾರಿತ ಭ್ರಷ್ಟಾಚಾರದ ಮೂಲಕ ಹಾಳುಗೆಡಹಿದರು. ಅದನ್ನೀಗ ನಮ್ಮ ಸರಕಾರ ಸರಿಪಡಿಸುತ್ತಿದೆ. ಕೇರಳದಲ್ಲಿ ಅಲ್ಲಿನ ಕಮ್ಯುನಿಸ್ಟ್‌ ಸರಕಾರ ಯಾರಾದರೂ ಶಬರಿಮಲೆ ಸ್ವಾಮಿ ಅಯ್ಯಪ್ಪ ಎಂದರೆ ಕೇಸು ಜಡಿಯುತ್ತದೆ. ಬಿಜೆಪಿ ಅಭ್ಯರ್ಥಿಗಳ ಮೇಲೂ ಕೇಸು ಜಡಿದು ಜೈಲಿಗೆ ಹಾಕಲಾಯಿತು. ಇದು ಪ್ರಜಾತಂತ್ರವೇ ? ಎಂದು ಪ್ರಶ್ನಿಸಿದರು. ಮೋದಿಯವರು ಟೆಲಿಪ್ರಾಂಪ್ಟರ್‌ ಬಳಸಿ ಭಾಷಣ ಮಾಡಿದರು.
Vijayasankalpa
ಶಾಸಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಸ್ವಾಗತಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್‌ ಎಂ. ನಿರೂಪಿಸಿದರು. ಜಿಲ್ಲಾ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಸಹಪ್ರಭಾರಿ ಪ್ರತಾಪಸಿಂಹ ನಾಯಕ್‌, ಶಾಸಕರಾದ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಉಮನಾಥ ಕೋಟ್ಯಾನ್‌, ಹರೀಶ್‌ ಪೂಂಜ, ಅಂಗಾರ, ರಾಜೇಶ್‌ ನಾೖಕ್‌ ಉಳಿಪಾಡಿ, ರಘಪತಿ ಭಟ್‌, ಲಾಲಾಜಿ ಮೆಂಡನ್‌, ಸುಕುಮಾರ್‌ ಶೆಟ್ಟಿ , ಕ್ಯಾ| ಗಣೇಶ್‌ ಕಾರ್ಣಿಕ್‌, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಟ್ಟಾರು ರತ್ನಾಕರ ಹೆಗ್ಡೆ, ಉದಯ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.

Vijayasankalpa

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English