ಬಂಟ್ವಾಳ : ಪಾಣೆಮಂಗಳೂರಿನ ಹಳೆಟೋಲ್ ಗೇಟ್ ಸಮೀಪ ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿ ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಏ.26 ರ ಶುಕ್ರವಾರ 3 ಗಂಟೆ ವೇಳೆಗೆ ನಡೆದಿದೆ.
ಪುತ್ತೂರಿನಿಂದ ಕಡೆಯಿಂದ ವೇಗವಾಗಿ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಬಂಟ್ವಾಳ ಕಡೆಯಿಂದ ಹೋಗುತ್ತಿದ್ದ ಕಾರಿನ ನಡುವೆ ಮುಖಮುಖಿ ಢಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಾದ ಸರೋಜಿನಿ ಮತ್ತು ರುಕ್ಮಿಣಿ ಎಂಬಿಬ್ಬರು ಸಾವನ್ನಪ್ಪಿದ್ದಾರೆ. ಕಾರು ಚಾಲಕ ಹಾಗೂ ಅನುಷಾ ಎಂಬವರು ಗಂಭೀರ ಗಾಯಗೊಂಡಿದ್ದು ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದವರು ಮಂಗಳೂರಿನ ಜೆಪ್ಪು ನಿವಾಸಿಗಳಾಗಿದ್ದು, ಇವರು ಶಂಬೂರಿನಲ್ಲಿರುವ ತಮ್ಮ ಸಂಬಂಧಿಕರ ಗೃಹಪ್ರವೇಶಕ್ಕೆಂದು ತೆರಳುತ್ತಿದ್ದರು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
Click this button or press Ctrl+G to toggle between Kannada and English