ಮಂಗಳೂರು : ಆ್ಯಂಬುಲೆನ್ಸ್ಗೆ ಸೈಡ್ ಕೊಡುವ ಸಂದರ್ಭದಲ್ಲಿ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕೊಕ್ಕಡ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಎರಡೂ ಕಾರಿನ ಮುಂಭಾಗ ತೀವ್ರವಾಗಿ ಜಖಂಗೊಂಡಿವೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ ಮಾರುತಿ ಸ್ವಿಫ್ಟ್ ಡಿಸೈರ್ ಹಾಗೂ ಪುತ್ತೂರಿನ ಮಾರುತಿ ಸೆಲರಿಯೋ ಅಪಘಾತಕ್ಕೊಳಗಾಗಿವೆ. ಅತೀ ವೇಗದಲ್ಲಿ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
Click this button or press Ctrl+G to toggle between Kannada and English