ಮಂಗಳೂರು : ದೈವ ಪಾತ್ರಿಯೊಬ್ಬರ ತಲೆ ಬೋಳಿಸಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ನಗರದ ಬಿಕರ್ನಕಟ್ಟೆ ಎಂಬಲ್ಲಿ ನಡೆದಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ದೈವಪಾತ್ರಿಯೊಬ್ಬರಿಗೆ ಮಹಿಳೆಯರೂ ಸಹಿತ ಕೂದಲನ್ನು ಬಲವಂತವಾಗಿ ಕತ್ತರಿಸಿ ಹಲ್ಲೆ ನಡೆಸಿರುವುದು ದಾಖಲಾಗಿದೆ.
ಇಲ್ಲಿಯ ಸ್ಥಳೀಯ ದೈವ ಪಾತ್ರಿ ಲೋಕೇಶ್ ಪೂಜಾರಿ ಅವರ ಮೇಲೆ ಈ ಹಲ್ಲೆ ನಡೆಸಲಾಗಿದ್ದು, ದೈವದ ನರ್ತನ ಸೇವೆ ನಡೆದ ಬಳಿಕ ಕೆಲವರು ಸೇರಿ ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಲೋಕೇಶ್ ಅವರಿಗೆ ಸಲಿಂಗಕಾಮದ ಬಗ್ಗೆ ಜನರ ಗುಂಪೊಂದು ಪ್ರಶ್ನಿಸಿದ್ದು, ಈ ವಿಷಯಕ್ಕೆ ಸಂಭಂದಿಸಿದಂತೆ ಕೈಯಲ್ಲಿ ಹಾಕಿದ ಖಡ್ಗ ತೆಗೆಯುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ, ಬಲವಂತವಾಗಿ ಪಾತ್ರಿಯ ತಲೆ ಕೂದಲನ್ನು ಕತ್ತರಿಸಿದ್ದಾರೆ. ಈ ನಡುವೆ ಹಿರಿಯರು ತಡೆಯಲು ಯತ್ನಿಸಿದರೂ ಯುವಕರ ಗುಂಪು ಲೋಕೇಶ್ ಮೇಲೆ ಹಲ್ಲೆ ನಡೆಸಿದೆ.
ಈ ಘಟನೆ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಚರ್ಚೆಗೆ ಆರಂಭವಾಗಿದೆ. ಆದರೆ ಈ ಘಟನೆ ಕುರಿತಾಗಲಿ, ಹಲ್ಲೆಯ ಬಗ್ಗೆಯಾಗಲೀ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಲೋಕೇಶ್ ಪೂಜಾರಿ ವೃತ್ತಿಯಲ್ಲಿ ದೈವ ಪಾತ್ರಿಯಾಗಿದ್ದರೂ, ಸಲಿಂಗ ಕಾಮ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಯುವಕರು ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ದೈವ ಪಾತ್ರಿಗಳೇ ಇಂಥ ವರ್ತನೆ ತೋರಿದರೆ ಹೇಗೆ? ಎನ್ನುವ ಆಕ್ರೋಶದಿಂದ ಯುವಕರು ಈ ರೀತಿ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Click this button or press Ctrl+G to toggle between Kannada and English