ಲಂಚ ಸ್ವೀಕರಿಸಿದ ಕೊಕ್ಕಡ ಗ್ರಾಪಂ ಅಧ್ಯಕ್ಷ ಅಮಾನತು

8:00 PM, Monday, May 13th, 2019
Share
1 Star2 Stars3 Stars4 Stars5 Stars
(No Ratings Yet)
Loading...

sebastianಮಂಗಳೂರು : ಕೊಕ್ಕಡ ಗ್ರಾಪಂ ಅಧ್ಯಕ್ಷ ವಿ.ಜೆ.ಸೆಬಾಸ್ಟಿಯನ್ ಅವರ ಅಧ್ಯಕ್ಷ ಸ್ಥಾನ ಮತ್ತು ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧೀನ ಕಾರ್ಯದರ್ಶಿ ಹಾಗೂ ಉಪ ನಿರ್ದೇಶಕ ಮುಬಾರಕ್ ಅಹ್ಮದ್ ಆದೇಶ ಹೊರಡಿಸಿದ್ದಾರೆ.

2017-18ನೇ ಸಾಲಿನಲ್ಲಿ ನಡೆಸಿರುವ ವಿವಿಧ ಕಾಮಗಾರಿಗಳ ಹಣಕಾಸು ಮಂಜೂರು ಮಾಡಲು ಗುತ್ತಿಗೆದಾರ ಉಮರ್ ಅಲಿಯಾಸ್, ಇಬ್ರಾಹೀಂ ಎಂಬವರಿಗೆ 50 ಸಾವಿರ ರೂ. ಲಂಚ ನೀಡುವಂತೆ ವಿ.ಜೆ.ಸೆಬಾಸ್ಟಿಯನ್ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ 20 ಸಾವಿರ ರೂ. ಸೆಬಾಸ್ಟಿಯನ್ಗೆ ನೀಡಲಾಗಿತ್ತು. ಉಳಿದ ಹಣವನ್ನು ಸೆಬಾಸ್ಟಿಯನ್ ಸೂಚನೆ ಮೇರೆಗೆ ಪಿಡಿಒ ಪುರುಷೋತ್ತಮ್ ಎಂಬವರು 2018ರ ಫೆ.5 ರಂದು ಹಣ ಸ್ವೀಕರಿಸುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭ ಸೆಬಾಸ್ಟಿಯನ್ ಹಾಗೂ ಪುರುಷೋತ್ತಮ್ರನ್ನು‌ ಎಸಿಬಿ‌ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆ ಗೊಂಡಿದ್ದರು.

ಇದೀಗ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ವಿ.ಜೆ.ಸೆಬಾಸ್ಟಿಯನ್ ಅವರ ಅಧ್ಯಕ್ಷ ಸ್ಥಾನ ಮತ್ತು ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English