ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳ ದಾರುಣ ಸಾವು

11:52 PM, Tuesday, June 11th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Barekinade-death

ಬಂಟ್ವಾಳ :  ಬಂಟ್ವಾಳ ತಾಲೂಕಿನ ವಾಮದಪದವು ಬಾರೆಕಿನಾಡೆ ಎಂಬಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳ ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ಸಂಜೆ  ನಡೆದಿದೆ.

ಗೋಪಾಲಕೃಷ್ಣ ಶೆಟ್ಟಿ ಹಾಗೂ ಮಗಳು 23ರ ಹರೆಯದ ದಿವ್ಯಶ್ರೀ ಮೃತ ದುರ್ದೈವಿಗಳು. ಇವರು ಮಂಗಳವಾರ ಸಂಜೆ ತಮ್ಮ ಮನೆಯ ತೋಟಕ್ಕೆ ಹುಲ್ಲು ತರಲೆಂದು ತೆರಳಿದ್ದರು. ಈ ವೇಳೆ ಹುಲ್ಲಿನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಇದನ್ನು ಗಮನಿಸದೇ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಳೆ ವಿದ್ಯುತ್ ತಂತಿ ಬದಲಿಸದಿರುವುದು ಘಟನೆಗೆ ಕಾರಣ ಎಂದು ಸ್ಥಳೀಯರು ಮೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English