ಸಚಿವ ಡಿ.ಕೆ ಶಿವಕುಮಾರ್ ಮುಂಬಯಿ ಪೊಲೀಸರು ವಶಕ್ಕೆ

3:27 PM, Wednesday, July 10th, 2019
Share
1 Star2 Stars3 Stars4 Stars5 Stars
(No Ratings Yet)
Loading...

DKSHIಮುಂಬಯಿ : ಅತೃಪ್ತ ಶಾಸಕರನ್ನು ಭೇಟಿ ಮಾಡಲೇಬೇಕೆಂದು ಹಠ ಹಿಡಿದು ಬೆಳಗ್ಗೆಯಿಂದ ಮುಂಬಯಿಯ ಹೋಟೆಲ್ ಮುಂದೆ ಕಾದು ಕುಳಿತಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅತೃಪ್ತ ಶಾಸಕರನ್ನು ಭೇಟಿ ಮಾಡಲು ಬೆಳಗ್ಗೆ 8 ಗಂಟೆಯಿಂದ ಡಿಕೆಶಿ ಬಿಗಿ ಪಟ್ಟು ಹಿಡಿದು ರಿನೈಸೆನ್ಸ್ ಹೋಟೆಲ್ ಬಳಿ ಕಾದು ಕುಳಿತಿದ್ದರು, ಹೋಟೆಲ್ ಮುಂಬಾಗ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಹೋಟೆಲ್ ಸುತ್ತಮುತ್ತ ನಿಷೇದಾಜ್ಞೆ ಜಾರಿ ಗೊಳಿಸಿತ್ತು.

ನಿಷೇದಾಜ್ಞೆಯ ನಡುವೆಯೂ ಹೋಟೆಲ್ ಮುಂದೆ ಕುಳಿತಿದ್ದ ಶಿವಕುಮಾರ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು, ಹೀಗಾಗಿ ಸಚಿವ ಶಿವಕುಮಾರ್ ಅವರನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ,
ಕಲಿನಾ ವಿವಿ ವಿಶ್ರಾಂತಿ ಗೃಹಕ್ಕೆ

ಇನ್ನು ಮುಂಬೈ ಪೋಲೀಸರು ವಶಕ್ಕೆ ಪಡೆದಿರುವ ಕರ್ನಾಟಕದ ಸಚಿವ ಡಿಕೆ ಶಿವಕುಮಾರ್ ಮತ್ತು ಇತರೆ ಕಾಂಗ್ರೆಸ್ ಮುಖಂಡರನ್ನು ಕಲಿನಾ ವಿಶ್ವವಿದ್ಯಾನಿಲಯದ ವಿಶ್ರಾಂತಿ ಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English