ಸುರತ್ಕಲ್ ಟೋಲ್ ಗೇಟ್ ಸುಂಕ : ಕಾಂಗ್ರೆಸ್ ನಿಂದ ಬಿಜೆಪಿ ಪಕ್ಷದ ಶಾಸಕರಿಗೆ ಸಂಸದರಿಗೆ ಛೀಮಾರಿ

7:59 PM, Tuesday, July 16th, 2019
Share
1 Star2 Stars3 Stars4 Stars5 Stars
(No Ratings Yet)
Loading...

Surathkal Toll ಸುರತ್ಕಲ್ : ಸುರತ್ಕಲ್ ಟೋಲ್ ಗೇಟ್ ನಲ್ಲಿ ಸ್ಥಳೀಯ ಖಾಸಗಿ ವಾಹನಗಳಿಗೆ ಟೋಲ್ ವಿಧಿಸಿರುವುದನ್ನು ವಿರೋಧಿಸಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಮಂಗಳವಾರ ಪ್ರತಿಭಟನೆ ನಡೆಸಿತು .

ಸುರತ್ಕಲ್ ಟೋಲ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೂಳೂರಿನಿಂದ ಸುರತ್ಕಲ್ ವರೆಗೆ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟಿದೆ. ಸುಮಾರು 9 ತಿಂಗಳ ಮುಂಚಿತವಾಗಿ ಟೋಲ್ ಗೇಟ್ ನ ಬಗ್ಗೆ ಅಹೋರಾತ್ರಿ ಧರಣಿ ನಡೆಸಿದ್ದೇವೆ. ಆದರೆ ಬಿಜೆಪಿಯವರು ಈಗ ಪ್ರತಿಭಟನೆಯ ನೆಪದಲ್ಲಿ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಪಕ್ಷದವರು ಶಾಸಕರಿಗೆ ಸಂಸದರಿಗೆ ಛೀಮಾರಿ ಹಾಕುವ ಹಾಗೂ ಅವರನ್ನು ಬಹಿಸ್ಕರಿಸುವುದನ್ನು ಮಾಡಲಿ ಎಂದ ಮಿಥುನ್ ರೈ ಸಂಸದರಿಗೆ ಚಪ್ಪಲಿಯಲ್ಲಿ ಹೊಡೆಯಲಿ ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.

11 ದಿನಗಳ ಕಾಲ ಟೋಲ್ ಗೇಟ್ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದರೂ ಸಂಸದರು ಇದೇ ರಸ್ತೆಯಲ್ಲಿ ತೆರಳಿದ್ದಾರೆ. ಆದರೂ ಕೂಡಾ ನಮ್ಮಲ್ಲಿನ ಪ್ರತಿಭಟನೆಗೆ ಅವರು ಯಾವುದೇ ಸ್ಪಂದನೆ ನೀಡಿಲ್ಲ. ನಮ್ಮ‌ ಸಮಿತಿಯ ವತಿಯಿಂದ ಇಂದು ಟೋಲ್ ಗೇಟ್ ಹೋರಾಟಕ್ಕೆ ಅಲ್ಪ ಪ್ರಮಾಣದ ಜಯಸಿಕ್ಕಿದೆ. ಬಿಜೆಪಿಯವರು ಕೇವಲ ರಾಜಕೀಯ ಲಾಭಕ್ಕಾಗಿ ಜನರ ಕಣ್ಣಿಗೆ ಕಟ್ಟುವಂತೆ ಇಂದು ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English