ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಅಭಿಮಾನಿಗಳಿಂದ ಗೋಗಲ್ಲಮ್ಮನಿಗೆ ವಿಶೇಷ ಪೂಜೆ

9:09 PM, Tuesday, July 16th, 2019
Share
1 Star2 Stars3 Stars4 Stars5 Stars
(No Ratings Yet)
Loading...

gogalammaಮಂಡ್ಯ :  ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು ಪ್ರಾರ್ಥಿಸಿ ಅವರ ಹುಟ್ಟೂರು ಬೂಕನಕೆರೆ ಗ್ರಾಮದಲ್ಲಿ ಮಂಗಳವಾರ ಅಭಿಮಾನಿಗಳು, ಬಿಜೆಪಿ ಮುಖಂಡರು ಗ್ರಾಮದೇವತೆ ಗೋಗಲ್ಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸೋಮವಾರ ರಾತ್ರಿಯಿಂದಲೇ ಗ್ರಾಮದ ಹಲವು ದೇವಾಲಯಗಳನ್ನು ಸ್ವಚ್ಛಗೊಳಿಸಿ ತಳಿರು, ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ಮಂಗಳವಾರ ನಸುಕಿನಿಂದಲೇ ಗಣಹೋಮ, ಅಭಿಷೇಕ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಯಡಿಯೂರಪ್ಪ ಅವರ ಮನೆ ದೇವರಾದ ಕಾಪನಹಳ್ಳಿ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ಸನ್ನಧಿಯಲ್ಲಿಯೂ ವಿಶೇಷ ಪೂಜೆ ನೆರವೇರಿಸಲಾಯಿತು.

ಯಡಿಯೂರಪ್ಪ ಅವರು ಆಗಾಗ ಹುಟ್ಟೂರಿಗೆ ಬಂದು ಗೋಗಲಮ್ಮನಿಗೆ ಪೂಜೆ ಸಲ್ಲಿಸುತ್ತಾರೆ. ಸಮ್ಮಿಶ್ರ ಸರ್ಕಾರ ಪತನವಾಗಲಿದ್ದು ಬೂಕನಕರೆಯ ಪುತ್ರ ಮುಖ್ಯಮಂತ್ರಿಯಾಗಬೇಕು ಎಂದು ಅಭಿಮಾನಿಗಳು ಪ್ರಾರ್ಥಿಸಿದರು.

ಪೂಜಾ ಕೈಂಕರ್ಯದಲ್ಲಿ ಯಡಿಯೂರಪ್ಪ ಸಹೋದರಿ ಪ್ರೇಮಮ್ಮ, ಅವರ ಮಗ ಅಶೋಕ್ ಹಾಗೂ ಸೊಸೆ ಸಂಧ್ಯಾರಾಣಿ , ಬಿಜೆಪಿ ಪಕ್ಷದ ಮುಖಂಡರಾದ ಕೆ.ಎಸ್.ನಂಜುಂಡೇಗೌಡ , ಬೂಕನಕೆರೆ ಮಧುಸೂದನ್, ಮೀನಾಕ್ಷಮ್ಮ, ಪುಟ್ಟರಾಜು, ತೋಟಪ್ಪ ಇದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English