ಸಂದೀಪ್ ಪಾಟೀಲ್ ವರ್ಗಾವಣೆ, ನೂತನ ನಗರ ಪೊಲೀಸ್ ಕಮಿಷನರ್ ಆಗಿ ಎ ಸುಬ್ರಹ್ಮಣ್ಯೇಶ್ವರ ರಾವ್

9:44 PM, Thursday, August 1st, 2019
Share
1 Star2 Stars3 Stars4 Stars5 Stars
(5 rating, 1 votes)
Loading...

subramaneshwara rao ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರನ್ನು  ಡಿಐಜಿ ಮತ್ತು ಬೆಂಗಳೂರು ನಗರ ಅಪರಾಧ ಇಲಾಖೆಯ ಜಂಟಿ ಆಯುಕ್ತರಾಗಿ ತಕ್ಷಣದಿಂದಲೇ ಅಧಿಕಾರಕ್ಕೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಕಮಿಷನರ್ ಆಗಿ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎ ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಕ ಮಾಡಲಾಗಿದೆ.

ಸುಬ್ರಹ್ಮಣ್ಯೇಶ್ವರ ರಾವ್ ಅವರು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದರು. ಬಳಿಕ ಮೈಸೂರು ಕಮಿಷರನ್ ಆದರು. ಮತ್ತೆ ಬೆಂಗಳೂರು ಇಂಟೆಲಿಜನ್ಸ್ ಡಿಐಜಿಯಾಗಿ ಆಗಿ ಇದೀಗ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನಿಯುಕ್ತಿಗೊಂಡಿದ್ದಾರೆ.

ಸಂದೀಪ್ ಪಾಟೀಲ್ ಅಕ್ರಮ ಗೋಸಾಗಾಣಿಕೆ, ಗಾಂಜಾ ಮಾರಾಟಗಾರರಿಗೆ ಕಡಿವಾಣ ಹಾಕಿದ್ದರು. ರೌಡಿಶೀಟರ್‌ಗಳ ಹೆಡೆಮುರಿ ಕಟ್ಟಲು ಶೂಟೌಟ್ ಆದೇಶವನ್ನೂ ನೀಡಿದ್ದರು. ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರ ದೂರು ದುಮ್ಮಾನಗಳನ್ನು ಆಲಿಸುತ್ತಿದ್ದರು. ಸಂದೀಪ್ ಪಾಟೀಲ್ ಪೊಲೀಸ್ ಫೋನ್ ಇನ್ ಕಾರ್ಯಕ್ರಮದ ಮೂಲಕವೂ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English