ನೇತ್ರಾವತಿ ಸೇತುವೆಗೆ ಸಿಸಿಟಿವಿ ಕ್ಯಾಮೆರಾ : ವೇದವ್ಯಾಸ ಕಾಮತ್

10:50 PM, Friday, August 2nd, 2019
Share
1 Star2 Stars3 Stars4 Stars5 Stars
(No Ratings Yet)
Loading...

cctvಮಂಗಳೂರು :  ನೇತ್ರಾವತಿ ಸೇತುವೆ ಬಳಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಚಿಂತನೆ ನಡೆಯುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಯವರೊಂದಿಗೆ ಚರ್ಚಿಸಲಾಗುವು ದೆಂದು ಶಾಸಕ ಡಿ.ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಉದ್ಯಮಿ ಸಿದ್ಧಾರ್ಥ್ ಅವರ ಸಾವಿನ ಬಳಿಕ ಮಂಗಳೂರು- ಉಳ್ಳಾಲ ರಸ್ತೆಯಲ್ಲಿನ ನೇತ್ರಾವತಿ ಸೇತುವೆ ಹೆಚ್ಚು ಸುದ್ದಿಯಲ್ಲಿದೆ.

“ನೇತ್ರಾವತಿ ಸೇತುವೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಾಯಕಾರಿ ತಾಣವಾಗಿದೆ. ಆತ್ಮಹತ್ಯೆಯಂತಹ ಅಹಿತಕರ ಘಟನೆಗಳಿಗೆ ಇದು ನೆಲೆಯಾಗುತ್ತಿದೆ. ಸಿಸಿ ಟಿವಿಗಳನ್ನು ಅಳವಡಿಸಿದರೆ ಸೇತುವೆ ಮೇಲೆ ನಡೆದ ದುರ್ಘಟನೆಗಳನ್ನು ತಕ್ಷಣ ಪರಿಶೀಲಿಸಲು ಅನುಕೂಲವಾಗುತ್ತದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದರಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಸಮಯ ಮತ್ತು ಶ್ರಮ ವ್ಯರ್ಥವಾಗುವುದಿಲ್ಲ” ಎಂದು ವೇದವ್ಯಾಸ ಕಾಮತ್ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English