ಮಂಗಳೂರು: ಆ.7ರಿಂದ ಎರಡು ದಿನ ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಿ ರುವುದಾಗಿ ದ.ಕ ಜಿಲ್ಲಾಧಿ ಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಸೋಮವಾರ ರಾತ್ರಿ ಸುರಿದ ಮಳೆಗೆ ಅಲ್ಲಲ್ಲಿ ಗುಡ್ಡಕುಸಿತ, ರಸ್ತೆಗೆ ಮರ ಬಿದ್ದಿದ್ದು, ಕಡಲ್ಕೊರೆತವು ಕಾಣಿಸಿಕೊಂಡಿದೆ ಎಂದು ಅವರು ತಿಳಿಸಿದರು.
ನೆರೆ ಪೀಡಿತ ಪ್ರದೇಶಗಳ ಜನರು ಎಚ್ಚರಿಕೆಯಿಂದ ಇರಬೇಕು. ನೆರೆ ಹಾವಳಿ ಆಗುವ ಸಂದರ್ಭದಲ್ಲಿ ಅಧಿಕಾರಿಗಳ ಸೂಚನೆ ಪಾಲಿಸಿ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
Click this button or press Ctrl+G to toggle between Kannada and English