ನಗರ ಪೊಲೀಸ್ ಆಯುಕ್ತರಾಗಿ ಡಾ.ಪಿ.ಎಸ್.ಹರ್ಷ ಅಧಿಕಾರ ಸ್ವೀಕಾರ

9:17 PM, Friday, August 9th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

CPCಮಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಡಾ.ಪಿ.ಎಸ್.ಹರ್ಷ ಅವರು ಶುಕ್ರವಾರ ಸಂಜೆ ಅಧಿಕಾರ ಸ್ವೀಕಾರ ಮಾಡಿದರು.

ದ.ಕ. ಜಿಲ್ಲೆಯ ಜನತೆ ಕಾನೂನು ಮೀರುವವರಲ್ಲ. ಅಧಿಕಾರವನ್ನು ಚಾಲೆಂಜಿಂಗ್ ಆಗಿ ಸ್ವೀಕರಿಸುವೆ. ಕಾನೂನು ಸುವ್ಯವಸ್ಥೆ ಕಾಪಾಡಲು ವಿಶೇಷ ಕಾಳಜಿ ವಹಿಸುವುದಾಗಿ ಡಾ.ಪಿ.ಎಸ್.ಹರ್ಷ ಹೇಳಿದರು.

CPCಜನಸಂಖ್ಯೆಗೆ ಅನುಗುಣ ಪೊಲೀಸರಿಲ್ಲ, ನಾವು ಶಕ್ತಿ ಮೀರಿ ಜನರ ರಕ್ಷಣೆ ಮುಂದಾಗುತ್ತೇವೆ. ಜನಪರ ಸೇವೆಗಾಗಿ ತಂಡದ ಪರವಾಗಿ ನಿಲ್ಲುತ್ತೇವೆ. ಜನಪ್ರತಿನಿಧಿ, ಸಮುದಾಯಗಳ ನಾಯಕರ, ಜನರ ಸಹಕಾರ ಕೇಳುವೆ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿ ತರುತ್ತೇವೆ ಎಂದು ಹೇಳಿದರು.

ಈ ಸಂದರ್ಭ ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀ ಗಣೇಶ್, ಎಸಿಪಿಗಳಾದ ಶ್ರೀನಿವಾಸ ಗೌಡ, ಕೋದಂಡರಾಮ, ವಿನಯ ಗಾಂವ್ಕರ್, ಭಾಸ್ಕರ್ ಒಕ್ಕಲಿಗ, ಮಂಜುನಾಥ ಶೆಟ್ಟಿ ಮತ್ತಿತರರು ಉಪಸ್ಥಿರಿದ್ದರು.

CPC

CPC

CPC

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English