ಶ್ರೀ ಕ್ಷೇತ್ರ ಪಣೋಲಿಬೈಲು ಕ್ಷೇತ್ರದ ಪ್ರಧಾನ ಅರ್ಚಕ ಬಾಬು ಮೂಲ್ಯ ನಿಧನ

1:24 PM, Monday, August 12th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

panolibailಬಂಟ್ವಾಳ : ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕರಾದ ಬಾಬು ಮೂಲ್ಯ(92) ಭಾನುವಾರ ಅಪರಾಹ್ನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಕೃಷಿ ಕುಟುಂಬದಿಂದ ಬಂದ ಇವರು “ಕಾರ್ನಿಕೊದ ಗಗ್ಗರ ಸೇವೆ” ಹಾಗೂ ಅಗೇಲು ಸೇವೆಗೆ ಖ್ಯಾತಿಯಾಗಿದ್ದ ಶ್ರೀ ಕ್ಷೇತ್ರ ಪನೋಲಿಬೈಲಿನಲ್ಲಿ ತಮ್ಮ 30 ವರ್ಷಗಳ ಸುಧೀರ್ಘ ಸೇವೆಯನ್ನು ಸಲ್ಲಿಸಿದ್ದಾರೆ.

ಶ್ರೀ ಕ್ಷೇತ್ರದ ಅರ್ಚಕನಾಗಿ ತನ್ನ ವೃತ್ತಿ ಜೀವನದಲ್ಲಿ ನಿಸ್ವಾರ್ಥವಾದ ಸೇವೆ ಸಲ್ಲಿಸಿದ್ದರು. ಇವರ ನಿಧನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ಯು.ರಾಜೇಶ್ ನಾಯ್ಕ್,ಮಾಜಿ ಸಚಿವ ರಮಾನಾಥ ರೈ ಸಂತಾಪ ಸೂಚಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English