ಬೆಳುವಾಯಿಯಲ್ಲಿ ಕಾರು ಡಿಕ್ಕಿ ನಾಲ್ವರಿಗೆ ಗಾಯ ವಿದ್ಯಾರ್ಥಿನಿ ಗಂಭೀರ

2:35 PM, Tuesday, August 13th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

belvaiಮೂಡುಬಿದಿರೆ : ಬೆಳುವಾಯಿಯಲ್ಲಿ ಇನ್ನೋವಾ ಕಾರೊಂದು ಕಾಲೇಜು ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ವಿದ್ಯಾರ್ಥಿನಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳುವಾಯಿ ಮುಡಾಯಿ ಕಾಡು ನಿವಾಸಿ ಜಗನ್ನಾಥ ಮಡಿವಾಳರ ಪುತ್ರಿ , ಉಡುಪಿ ಹಿರಿಯಡ್ಕ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶುಭಲಕ್ಷ್ಮಿ ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿ.

ಬೆಳಿಗ್ಗೆ ನಾಲ್ವರು ವಿದ್ಯಾರ್ಥಿಗಳು ಕಾರ್ಕಳ ಕಡೆಗೆ ಹೋಗುವ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದು ಈ ಸಂದರ್ಭದಲ್ಲಿ ಮೂಡುಬಿದಿರೆ ಕಡೆಯಿಂದ ಅತೀ ವೇಗದಿಂದ ಬಂದ ಇನ್ನೋವಾ ಕಾರು ಶುಭಲಕ್ಷ್ಮಿಗೆ ಢಿಕ್ಕಿ ಹೊಡೆದಿದ್ದು ಹೊಡೆತಕ್ಕೆ ಶುಭಲಕ್ಷ್ಮಿ ಸುಮಾರು ಹದಿನೈದು ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದು ತಲೆ ಮತ್ತು ಪಕ್ಕೆಲುಗಳಿಗೆ ಏಟುಗಳಾಗಿವೆ.

ತಲೆಗೆ ತೀವ್ರತರದ ಏಟು ಬಿದ್ದಿದ್ದರಿಂದ ಮೂಗು‌ ಮತ್ತು ಬಾಯಿಯಿಂದ ರಕ್ತ ಸೋರುತಿತ್ತು. ಜೀವಾಪಾಯದಿಂದ ಪಾರಾಗಿರುವ ವಿದ್ಯಾರ್ಥಿನಿ ಕೆಲವು ದಿನಗಳ ಕಾಲ ಕೋಮ ಸ್ಥಿತಿಯಲ್ಲಿರಬಹುದೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಉಳಿದಂತೆ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು ನಂತರ ಮರಕ್ಕೆ ಢಿಕ್ಕಿ ಹೊಡೆದು ನಿಂತಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English